<p><strong>ಬೆಂಗಳೂರು</strong>: ನೀಟ್ ಪರೀಕ್ಷೆಯನ್ನು ಆಗಸ್ಟ್ 31ರ ನಂತರ ನಡೆಸಲು ಮುಂದೂಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ‘ತಜ್ಞರ ವರದಿ ಆಧರಿಸಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಮುಂದೂಡಬೇಕಾದ ಸಂದರ್ಭ ಎದುರಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವಿವೇಚನೆಯನ್ನು ತಪ್ಪು ಎಂದು ಹೇಳಲಾಗುವುದಿಲ್ಲ’ ಎಂದು ಅಭಿಪ್ರಾಯಪಟ್ಟಿತು.</p>.<p>ಜಿ.ಬಿ. ಕುಲಕರ್ಣಿ ಮೆಮೋರಿಯಲ್ ಲೀಗಲ್ ಟ್ರಸ್ಟ್ ಅಧ್ಯಕ್ಷ ಡಾ. ವಿನೋದ್ ಜಿ. ಕುಲಕರ್ಣಿ ಅವರು ಅರ್ಜಿ ಸಲ್ಲಿಸಿ, ನೀಟ್ ಪರೀಕ್ಷೆಯನ್ನು ಮುಂದೂಡಬಾರದು ಎಂದು ನಿರ್ದೇಶನ ನೀಡಲು ಕೋರಿದ್ದರು.</p>.<p>‘ಏಪ್ರಿಲ್ 18ಕ್ಕೆ ಪರೀಕ್ಷೆ ನಡೆಯಬೇಕಿತ್ತು. ಒಂದು ದಿನ ಮುಂಚಿತವಾಗಿ ಮುಂದೂಡಿಕೆ ನಿರ್ಧಾರ ಪ್ರಕಟಿಸಲಾಯಿತು. ಆ ಸಂದರ್ಭದಲ್ಲಿ ಪರೀಕ್ಷೆ ಮುಂದೂಡಲು ಸಕಾರಣಗಳು ಇರಲಿಲ್ಲ’ ಎಂದು ಅರ್ಜಿದಾರರು ದೂರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನೀಟ್ ಪರೀಕ್ಷೆಯನ್ನು ಆಗಸ್ಟ್ 31ರ ನಂತರ ನಡೆಸಲು ಮುಂದೂಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ‘ತಜ್ಞರ ವರದಿ ಆಧರಿಸಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಮುಂದೂಡಬೇಕಾದ ಸಂದರ್ಭ ಎದುರಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವಿವೇಚನೆಯನ್ನು ತಪ್ಪು ಎಂದು ಹೇಳಲಾಗುವುದಿಲ್ಲ’ ಎಂದು ಅಭಿಪ್ರಾಯಪಟ್ಟಿತು.</p>.<p>ಜಿ.ಬಿ. ಕುಲಕರ್ಣಿ ಮೆಮೋರಿಯಲ್ ಲೀಗಲ್ ಟ್ರಸ್ಟ್ ಅಧ್ಯಕ್ಷ ಡಾ. ವಿನೋದ್ ಜಿ. ಕುಲಕರ್ಣಿ ಅವರು ಅರ್ಜಿ ಸಲ್ಲಿಸಿ, ನೀಟ್ ಪರೀಕ್ಷೆಯನ್ನು ಮುಂದೂಡಬಾರದು ಎಂದು ನಿರ್ದೇಶನ ನೀಡಲು ಕೋರಿದ್ದರು.</p>.<p>‘ಏಪ್ರಿಲ್ 18ಕ್ಕೆ ಪರೀಕ್ಷೆ ನಡೆಯಬೇಕಿತ್ತು. ಒಂದು ದಿನ ಮುಂಚಿತವಾಗಿ ಮುಂದೂಡಿಕೆ ನಿರ್ಧಾರ ಪ್ರಕಟಿಸಲಾಯಿತು. ಆ ಸಂದರ್ಭದಲ್ಲಿ ಪರೀಕ್ಷೆ ಮುಂದೂಡಲು ಸಕಾರಣಗಳು ಇರಲಿಲ್ಲ’ ಎಂದು ಅರ್ಜಿದಾರರು ದೂರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>