ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ.ಡಿ ಪ್ರಕರಣ ರದ್ದು ಕೋರಿದ್ದ ಕಟ್ಟಾ ಅರ್ಜಿ ವಜಾ

Last Updated 19 ಡಿಸೆಂಬರ್ 2020, 20:08 IST
ಅಕ್ಷರ ಗಾತ್ರ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಬಿಜೆಪಿ ಮುಖಂಡ ಕಟ್ಟಾ ಸುಬ್ರಮಣ್ಯ ನಾಯ್ಡು, ಅವರ ಪತ್ನಿ ಸೌಭಾಗ್ಯ ಮತ್ತು ಕೆಲ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಐಎಡಿಬಿ) ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್ ಆಧರಿಸಿ ಪಿಎಂಎಲ್‌ಎ ಅಡಿಯಲ್ಲಿ ಇ.ಡಿ ಪ್ರಕರಣ ದಾಖಲಿಸಿಕೊಂಡಿತ್ತು.

‘ಆಸ್ತಿ ಜಪ್ತಿ ಮಾಡಲು ಇ.ಡಿ ಕೈಗೊಂಡಿರುವ ಕ್ರಮಗಳನ್ನು ರದ್ದುಪಡಿಸಲು ಯಾವುದೇ ಆಧಾರಗಳಿಲ್ಲ. ಕಾನೂನು ಬಾಹಿರ ವಿಧಾನಗಳಿಂದ ಸಂಪಾದಿಸಿದ ಸಂಪತ್ತನ್ನು ಅನುಭವಿಸಲು ಕಾನೂನಿನಲ್ಲಿ ಅವಕಾಶ ಇಲ್ಲ’ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT