ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಪಾವತಿಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿತು. ‘ಸೆಕ್ಷನ್ 13ರ ಅಡಿಯಲ್ಲಿ ಸೂಚಿಸಿರುವಂತೆ ಪುನರ್ವಸತಿ ಯೋಜನೆಯಡಿ ಮೃತರ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ನೆರವು, ಜೀವನೋಪಾಯಕ್ಕೆ ಕೌಶಲ ತರಬೇತಿ, ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬೇಕಾಗುತ್ತದೆ. ₹10 ಲಕ್ಷ ಪರಿಹಾರ ನೀಡಿರುವುದನ್ನು ಬಿಟ್ಟರೆ ಸರ್ಕಾರ ಬೇರೆ ಏನನ್ನೂ ಮಾಡಿದಂತೆ ಕಾಣಿಸುತ್ತಿಲ್ಲ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದರು.