<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳ ಬಳಿಕ ಹೈಕೋರ್ಟ್ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಸೇರಿದಂತೆ ಕುಟುಂಬದ ಕೆಲವು ಸದಸ್ಯರಿಗೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ನೋಟಿಸ್ ಜಾರಿ ಮಾಡಿದೆ.</p>.<p>ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಮತ್ತು ಐಎಎಸ್ ಅಧಿಕಾರಿಯೊಬ್ಬರಿಗೂ ನೋಟಿಸ್ ಹೋಗಿದೆ.</p>.<p>ಪ್ರಸಕ್ತ ವರ್ಷ ಜುಲೈ 8ರಂದು ವಿಶೇಷ ನ್ಯಾಯಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಂ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಏಕ ಸದಸ್ಯ ಪೀಠದ ನ್ಯಾ. ಎಸ್ ಸುನೀಲ್ ದತ್ ಯಾದವ್ ನೋಟಿಸ್ ಜಾರಿ ಮಾಡಿದ್ದಾರೆ.</p>.<p>ಅಂದಿನ ಸಿಎಂ ಯಡಿಯೂರಪ್ಪ ಮತ್ತು ಸಚಿವರಾಗಿದ್ದ ಸೋಮಶೇಖರ್ ವಿರುದ್ಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಯಲ್ಲಿ ಗುತ್ತಿಗೆದಾರರಿಂದ ಕಿಕ್ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ವಿಶೇಷ ನ್ಯಾಯಲಯ ರದ್ದುಪಡಿಸಿತ್ತು.</p>.<p><a href="https://www.prajavani.net/karnataka-news/mekedatu-project-dispute-sadhguru-jaggi-vasudev-says-small-scale-dam-acceptable-for-local-benefits-854346.html" itemprop="url">ಮೇಕೆದಾಟು: ಸಣ್ಣಪ್ರಮಾಣದ ಅಣೆಕಟ್ಟೆಗಳ ನಿರ್ಮಾಣ ಸ್ವಾಗತಾರ್ಹ, ಸದ್ಗುರು </a></p>.<p>ವಿಧಾನಸಭೆಯಲ್ಲಿ ಈ ವಿಚಾರವಾಗಿ ಗಂಭೀರ ಚರ್ಚೆ ನಡೆದಿತ್ತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು ಮತ್ತು ಇದು ಗಂಭೀರ ಆರೋಪವೆಂದು ಒತ್ತಿ ಹೇಳಿದ್ದರು. ಯಡಿಯೂರಪ್ಪ ಮತ್ತು ಅವರ ಮಗ ಆರೋಪಗಳನ್ನು ತಳ್ಳಿ ಹಾಕಿದ್ದರು. ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಪ್ರತಿಕ್ರಿಯಿಸಿದ್ದರು.</p>.<p><a href="https://www.prajavani.net/technology/science/earth-before-and-after-500-years-how-humans-are-changing-the-planet-854295.html" itemprop="url">500 ವರ್ಷಗಳ ನಂತರ ಭೂಮಿ ಹೇಗಿರಲಿದೆ? </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳ ಬಳಿಕ ಹೈಕೋರ್ಟ್ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಸೇರಿದಂತೆ ಕುಟುಂಬದ ಕೆಲವು ಸದಸ್ಯರಿಗೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ನೋಟಿಸ್ ಜಾರಿ ಮಾಡಿದೆ.</p>.<p>ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಮತ್ತು ಐಎಎಸ್ ಅಧಿಕಾರಿಯೊಬ್ಬರಿಗೂ ನೋಟಿಸ್ ಹೋಗಿದೆ.</p>.<p>ಪ್ರಸಕ್ತ ವರ್ಷ ಜುಲೈ 8ರಂದು ವಿಶೇಷ ನ್ಯಾಯಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಂ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಏಕ ಸದಸ್ಯ ಪೀಠದ ನ್ಯಾ. ಎಸ್ ಸುನೀಲ್ ದತ್ ಯಾದವ್ ನೋಟಿಸ್ ಜಾರಿ ಮಾಡಿದ್ದಾರೆ.</p>.<p>ಅಂದಿನ ಸಿಎಂ ಯಡಿಯೂರಪ್ಪ ಮತ್ತು ಸಚಿವರಾಗಿದ್ದ ಸೋಮಶೇಖರ್ ವಿರುದ್ಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಯಲ್ಲಿ ಗುತ್ತಿಗೆದಾರರಿಂದ ಕಿಕ್ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ವಿಶೇಷ ನ್ಯಾಯಲಯ ರದ್ದುಪಡಿಸಿತ್ತು.</p>.<p><a href="https://www.prajavani.net/karnataka-news/mekedatu-project-dispute-sadhguru-jaggi-vasudev-says-small-scale-dam-acceptable-for-local-benefits-854346.html" itemprop="url">ಮೇಕೆದಾಟು: ಸಣ್ಣಪ್ರಮಾಣದ ಅಣೆಕಟ್ಟೆಗಳ ನಿರ್ಮಾಣ ಸ್ವಾಗತಾರ್ಹ, ಸದ್ಗುರು </a></p>.<p>ವಿಧಾನಸಭೆಯಲ್ಲಿ ಈ ವಿಚಾರವಾಗಿ ಗಂಭೀರ ಚರ್ಚೆ ನಡೆದಿತ್ತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು ಮತ್ತು ಇದು ಗಂಭೀರ ಆರೋಪವೆಂದು ಒತ್ತಿ ಹೇಳಿದ್ದರು. ಯಡಿಯೂರಪ್ಪ ಮತ್ತು ಅವರ ಮಗ ಆರೋಪಗಳನ್ನು ತಳ್ಳಿ ಹಾಕಿದ್ದರು. ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಪ್ರತಿಕ್ರಿಯಿಸಿದ್ದರು.</p>.<p><a href="https://www.prajavani.net/technology/science/earth-before-and-after-500-years-how-humans-are-changing-the-planet-854295.html" itemprop="url">500 ವರ್ಷಗಳ ನಂತರ ಭೂಮಿ ಹೇಗಿರಲಿದೆ? </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>