<p><strong>ಬೆಂಗಳೂರು</strong>: ಬೆಳಗಾವಿ ಜಿಲ್ಲೆಯ ಹಲವು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ತಮ್ಮ ಅಧಿಕಾರಾವಧಿ ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>‘ಸದಸ್ಯರ ಮನವಿಯನ್ನು ರಾಜ್ಯ ಚುನಾವಣಾ ಆಯೋಗ ಅಥವಾ ರಾಜ್ಯ ಸರ್ಕಾರ ಪರಿಗಣಿಸಿದರೆ ಪ್ರಜಾಪ್ರಭುತ್ವದ ಮೂಲ ತತ್ವಕ್ಕೆ ಅಪವಾದ ಮಾಡಿದಂತಾಗಲಿದೆ’ ಎಂದು ಹೈಕೋರ್ಟ್ ಧಾರವಾಡ ಪೀಠ ಅಭಿಪ್ರಾಯಪಟ್ಟಿದೆ.</p>.<p>ಆಡಳಿತಾಧಿಕಾರಿ ನೇಮಕ ಮಾಡಿರುವ ಸರ್ಕಾರದ ಆದೇಶ ಬದಿಗಿರಿಸಿ ಸದಸ್ಯರ ಅವಧಿಯನ್ನೇ ವಿಸ್ತರಣೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 2021ರ ಜೂನ್ 24ರಂದು ಏಕ ಸದಸ್ಯ ಪೀಠ ತಿರಸ್ಕರಿಸಿತ್ತು. ಬಳಿಕ ಅವರು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.</p>.<p>ಕೋವಿಡ್ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಚುನಾವಣೆ ನಡೆಸದೇ ಆಡಳಿತಾಧಿಕಾರಿ ನೇಮಕ ಮಾಡುವುದಾದರೆ, ಚುನಾಯಿತ ಸದಸ್ಯರ ಅವಧಿಯನ್ನೇ ವಿಸ್ತರಿಸಬಹುದು ಎಂದು ಸದಸ್ಯರು ಕೋರಿದ್ದರು.</p>.<p>‘ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಚುನಾಯಿತರಾಗುವುದು 5 ವರ್ಷಗಳ ಅವಧಿಗೆ ಮಾತ್ರ. ಸಂವಿಧಾನದ 74ನೇ ತಿದ್ದುಪಡಿಯಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿದೆ. ಕೃಷ್ಣಸಿಂಗ್ ತೋಮರ್ ಪ್ರಕರಣದ ಆದೇಶದಲ್ಲಿ ಸುಪ್ರೀಂಕೋರ್ಟ್ ಕೂಡ ಈ ಬಗ್ಗೆ ಉಲ್ಲೇಖ ಮಾಡಿದೆ’ ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಪ್ರದೀಪ್ಸಿಂಗ್ ಯೆರುರ್ ಅವರಿದ್ದ ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಳಗಾವಿ ಜಿಲ್ಲೆಯ ಹಲವು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ತಮ್ಮ ಅಧಿಕಾರಾವಧಿ ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>‘ಸದಸ್ಯರ ಮನವಿಯನ್ನು ರಾಜ್ಯ ಚುನಾವಣಾ ಆಯೋಗ ಅಥವಾ ರಾಜ್ಯ ಸರ್ಕಾರ ಪರಿಗಣಿಸಿದರೆ ಪ್ರಜಾಪ್ರಭುತ್ವದ ಮೂಲ ತತ್ವಕ್ಕೆ ಅಪವಾದ ಮಾಡಿದಂತಾಗಲಿದೆ’ ಎಂದು ಹೈಕೋರ್ಟ್ ಧಾರವಾಡ ಪೀಠ ಅಭಿಪ್ರಾಯಪಟ್ಟಿದೆ.</p>.<p>ಆಡಳಿತಾಧಿಕಾರಿ ನೇಮಕ ಮಾಡಿರುವ ಸರ್ಕಾರದ ಆದೇಶ ಬದಿಗಿರಿಸಿ ಸದಸ್ಯರ ಅವಧಿಯನ್ನೇ ವಿಸ್ತರಣೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 2021ರ ಜೂನ್ 24ರಂದು ಏಕ ಸದಸ್ಯ ಪೀಠ ತಿರಸ್ಕರಿಸಿತ್ತು. ಬಳಿಕ ಅವರು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.</p>.<p>ಕೋವಿಡ್ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಚುನಾವಣೆ ನಡೆಸದೇ ಆಡಳಿತಾಧಿಕಾರಿ ನೇಮಕ ಮಾಡುವುದಾದರೆ, ಚುನಾಯಿತ ಸದಸ್ಯರ ಅವಧಿಯನ್ನೇ ವಿಸ್ತರಿಸಬಹುದು ಎಂದು ಸದಸ್ಯರು ಕೋರಿದ್ದರು.</p>.<p>‘ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಚುನಾಯಿತರಾಗುವುದು 5 ವರ್ಷಗಳ ಅವಧಿಗೆ ಮಾತ್ರ. ಸಂವಿಧಾನದ 74ನೇ ತಿದ್ದುಪಡಿಯಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿದೆ. ಕೃಷ್ಣಸಿಂಗ್ ತೋಮರ್ ಪ್ರಕರಣದ ಆದೇಶದಲ್ಲಿ ಸುಪ್ರೀಂಕೋರ್ಟ್ ಕೂಡ ಈ ಬಗ್ಗೆ ಉಲ್ಲೇಖ ಮಾಡಿದೆ’ ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಪ್ರದೀಪ್ಸಿಂಗ್ ಯೆರುರ್ ಅವರಿದ್ದ ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>