<p><strong>ಬೆಂಗಳೂರು: </strong>ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ವಿಜಯನಗರ ಜಿಲ್ಲೆ ಘೋಷಣೆ ಮಾಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.</p>.<p>ಬಳ್ಳಾರಿಯ ಕೆ.ಕೋಟೇಶ್ವರ ರಾವ್ ಅರ್ಜಿ ಸಲ್ಲಿಸಿದ್ದು, ‘2020 ಡಿ.14ರಂದು ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಗ್ರಾಮ ಪಂಚಾಯಿತಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವ ಸಂದರ್ಭದಲ್ಲಿ ಈ ಅಧಿಸೂಚನೆ ಹೊರಡಿಸಿರುವುದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಲಾಭವಾಗಿದೆ’ ಎಂದು ಅವರು ಆರೋಪಿಸಿದ್ದಾರೆ.</p>.<p>ಅಫಿಡವಿಟ್ ಸಲ್ಲಿಸಿದ ಸರ್ಕಾರದ ಪರ ವಕೀಲರು, ‘ಇದು ಕೇವಲ ಕರಡು ಅಧಿಸೂಚನೆ. ನೀತಿ ಸಂಹಿತೆ ಉಲ್ಲಂಘನೆಯಾಗಿದ್ದರೆ ರಾಜ್ಯ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿ. ಈಗಾಗಲೇ ಚುನಾವಣೆ ಮುಗಿದಿದೆ. ಈ ಸಂದರ್ಭದಲ್ಲಿ ಚುನಾವಣೆ ಮುಂದೂಡಲು ಕೋರಿರುವುದು ಅಪ್ರಸ್ತುತ’ ಎಂದು ಹೇಳಿದರು.</p>.<p>ಅರ್ಜಿ ವಿಲೇವಾರಿ ಮಾಡಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರ ಮನವಿ ಆಧರಿಸಿ ನೀತಿ ಸಂಹಿತೆ ಉಲ್ಲಂಘನೆ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸುವಂತೆ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ವಿಜಯನಗರ ಜಿಲ್ಲೆ ಘೋಷಣೆ ಮಾಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.</p>.<p>ಬಳ್ಳಾರಿಯ ಕೆ.ಕೋಟೇಶ್ವರ ರಾವ್ ಅರ್ಜಿ ಸಲ್ಲಿಸಿದ್ದು, ‘2020 ಡಿ.14ರಂದು ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಗ್ರಾಮ ಪಂಚಾಯಿತಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವ ಸಂದರ್ಭದಲ್ಲಿ ಈ ಅಧಿಸೂಚನೆ ಹೊರಡಿಸಿರುವುದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಲಾಭವಾಗಿದೆ’ ಎಂದು ಅವರು ಆರೋಪಿಸಿದ್ದಾರೆ.</p>.<p>ಅಫಿಡವಿಟ್ ಸಲ್ಲಿಸಿದ ಸರ್ಕಾರದ ಪರ ವಕೀಲರು, ‘ಇದು ಕೇವಲ ಕರಡು ಅಧಿಸೂಚನೆ. ನೀತಿ ಸಂಹಿತೆ ಉಲ್ಲಂಘನೆಯಾಗಿದ್ದರೆ ರಾಜ್ಯ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿ. ಈಗಾಗಲೇ ಚುನಾವಣೆ ಮುಗಿದಿದೆ. ಈ ಸಂದರ್ಭದಲ್ಲಿ ಚುನಾವಣೆ ಮುಂದೂಡಲು ಕೋರಿರುವುದು ಅಪ್ರಸ್ತುತ’ ಎಂದು ಹೇಳಿದರು.</p>.<p>ಅರ್ಜಿ ವಿಲೇವಾರಿ ಮಾಡಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರ ಮನವಿ ಆಧರಿಸಿ ನೀತಿ ಸಂಹಿತೆ ಉಲ್ಲಂಘನೆ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸುವಂತೆ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>