ಮಂಡ್ಯ ಜಿಲ್ಲೆಯ ಸುಶೀಲಾ ಎಂಬುವರು ಮಂಜುನಾಥ್ ಅವರೊಂದಿಗೆ ಹಿಂದೂ ವಿವಾಹ ಕಾಯ್ದೆಯ ಪ್ರಕಾರ 2012ರ ಜೂನ್ 15ರಂದು ಪಾಣಿಗ್ರಹಣ ಮಾಡಿದ್ದರು. ನಂತರ ಪತಿ ಮಂಜುನಾಥ್, ‘ಮದುವೆಯಾಗುವಾಗ ನನ್ನ ಪತ್ನಿ ಅಪ್ರಾಪ್ತೆಯಾಗಿದ್ದರು. ಆದ್ದ
ರಿಂದ, ಈ ಮದುವೆಯನ್ನು ಅನೂರ್ಜಿತ ಗೊಳಿಸಬೇಕು’ ಎಂದು ಕೋರಿ ಕೌಟುಂ ಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಮದುವೆಯನ್ನು ಅನೂರ್ಜಿತಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಸುಶೀಲಾ ಹೈಕೋರ್ಟ್ ಮೆಟ್ಟಿಲೇರಿದ್ದರು.