<p><strong>ಬೆಂಗಳೂರು:‘</strong>ಹಾಸನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ವಿಧಾನ ಪರಿಷತ್ಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆರ್.ಸೂರಜ್ (ಸೂರಜ್ ರೇವಣ್ಣ) ಅವರ ನಾಮಪತ್ರ ಕಾನೂನು ಬಾಹಿರವಾಗಿದೆ’ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ಈ ಸಂಬಂಧ ಹಾಸನ ಜಿಲ್ಲೆ ದಂಡಿಗಾನ ಹೋಬಳಿಯ ಕುಂದೂರು ಗ್ರಾಮದ ಕೆ.ಎಲ್.ಹರೀಶ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಜಾಗೊಳಿಸಿತು.</p>.<p>‘ಚುನಾವಣಾ ವೇಳಾಪಟ್ಟಿ ಘೋಷಣೆ<br />ಯಾದ ನಂತರ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ನಿಮ್ಮ ಆಕ್ಷೇಪಣೆ ಏನಾದರೂ ಇದ್ದರೆ ಅದನ್ನು ಚುನಾವಣಾ ತಕರಾರು ಅರ್ಜಿ ಸಲ್ಲಿಸಿ ಪರಿಹಾರ ಪಡೆಯಿರಿ’ ಎಂದು ನ್ಯಾಯಪೀಠ ಆದೇಶಿಸಿದೆ.</p>.<p class="Subhead"><strong>ಆಕ್ಷೇಪಣೆ ಏನಿತ್ತು?: </strong>‘ಆರ್.ಸೂರಜ್ ಅವರು ತಮ್ಮ ನಾಮಪತ್ರದೊಂದಿಗೆ ಸಲ್ಲಿಸಿರುವ ನಮೂನೆ 26ರ ಅಡಿಯಲ್ಲಿನ ಪ್ರಮಾಣ ಪತ್ರದಲ್ಲಿ ಅನೇಕ ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ. ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರ, ನಗದು, ಸಾಲ ಹಾಗೂ ಆರ್ಥಿಕ ವಿವರಗಳನ್ನು ಸಂಪೂರ್ಣವಾಗಿ ಬಹಿರಂಗ<br />ಪಡಿಸಿಲ್ಲ. ಆದ್ದರಿಂದ, ಇವರ ನಾಮಪತ್ರ ತಿರಸ್ಕರಿಸಬೇಕು ಅಥವಾ ಆಯುಕ್ತರಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:‘</strong>ಹಾಸನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ವಿಧಾನ ಪರಿಷತ್ಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆರ್.ಸೂರಜ್ (ಸೂರಜ್ ರೇವಣ್ಣ) ಅವರ ನಾಮಪತ್ರ ಕಾನೂನು ಬಾಹಿರವಾಗಿದೆ’ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ಈ ಸಂಬಂಧ ಹಾಸನ ಜಿಲ್ಲೆ ದಂಡಿಗಾನ ಹೋಬಳಿಯ ಕುಂದೂರು ಗ್ರಾಮದ ಕೆ.ಎಲ್.ಹರೀಶ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಜಾಗೊಳಿಸಿತು.</p>.<p>‘ಚುನಾವಣಾ ವೇಳಾಪಟ್ಟಿ ಘೋಷಣೆ<br />ಯಾದ ನಂತರ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ನಿಮ್ಮ ಆಕ್ಷೇಪಣೆ ಏನಾದರೂ ಇದ್ದರೆ ಅದನ್ನು ಚುನಾವಣಾ ತಕರಾರು ಅರ್ಜಿ ಸಲ್ಲಿಸಿ ಪರಿಹಾರ ಪಡೆಯಿರಿ’ ಎಂದು ನ್ಯಾಯಪೀಠ ಆದೇಶಿಸಿದೆ.</p>.<p class="Subhead"><strong>ಆಕ್ಷೇಪಣೆ ಏನಿತ್ತು?: </strong>‘ಆರ್.ಸೂರಜ್ ಅವರು ತಮ್ಮ ನಾಮಪತ್ರದೊಂದಿಗೆ ಸಲ್ಲಿಸಿರುವ ನಮೂನೆ 26ರ ಅಡಿಯಲ್ಲಿನ ಪ್ರಮಾಣ ಪತ್ರದಲ್ಲಿ ಅನೇಕ ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ. ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರ, ನಗದು, ಸಾಲ ಹಾಗೂ ಆರ್ಥಿಕ ವಿವರಗಳನ್ನು ಸಂಪೂರ್ಣವಾಗಿ ಬಹಿರಂಗ<br />ಪಡಿಸಿಲ್ಲ. ಆದ್ದರಿಂದ, ಇವರ ನಾಮಪತ್ರ ತಿರಸ್ಕರಿಸಬೇಕು ಅಥವಾ ಆಯುಕ್ತರಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>