ವಿಚಾರಣೆ ವೇಳೆ ಹೈಕೋರ್ಟ್ನ ಹಿರಿಯ ವಕೀಲರೂ ಆದ ಅಮಿಕಸ್ ಕ್ಯೂರಿ ಕೆ.ಎನ್. ಫಣೀಂದ್ರ, ‘ಹೈಕೋರ್ಟ್ ನಿರ್ದೇಶನದ ಅನುಸಾರ ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಕರೆತರುವ ವಿಚಾರಕ್ಕೆ ಸಂಬಂಧಿಸಿದಂತೆ ಉನ್ನತಾಧಿಕಾರ ಸಮಿತಿ ಇದೇ 16ರಂದು ಸಭೆ ನಡೆಸಿದೆ. ಸಭೆಯ ನಡಾವಳಿಯ ಕರಡು ಪಟ್ಟಿ ನನಗೆ ತಲುಪಿದೆ. ಆದರೆ, ಅದನ್ನು ಅಂತಿಮಗೊಳಿಸಿ ವರದಿಯನ್ನು ಕೋರ್ಟ್ಗೆ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ಬೇಕು’ ಎಂದು ಕೋರಿದರು.ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.