‘ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರ ಅನುಮತಿ ನೀಡದ ಕಾರಣ ಗಂಗಾರಾಂ ಬಡೇರಿಯಾ ಅವರ ವಿರುದ್ಧ ದೋಷಾರೋಪ ದಾಖಲಾಗಿಲ್ಲ. ಈ ಪ್ರಕರಣದಲ್ಲಿ ನನ್ನನ್ನು ತಪ್ಪಾಗಿ ಅರ್ಥೈಸಿಕೊಂಡು ಆರೋಪಿಯನ್ನಾಗಿ ಮಾಡಲಾಗಿದೆ. ‘ಟ್ವೆಂಟಿ ಫಸ್ಟ್ ಸೆಂಚುರಿ ವೈರ್ ರಾಡ್ಸ್ ಲಿಮಿಟೆಡ್’ನಿಂದ ನನ್ನ ಖಾತೆಗೆ ಹಣ ಸಂದಾಯವಾಗಿದೆ. ಈ ಕಂಪನಿ ಗಣಿಗಾರಿಕೆಗೆ ಸಂಬಂಧಿಸಿದ ವ್ಯವಹಾರ ನಡೆಸುವುದಿಲ್ಲ ಮತ್ತು ಅವರ ಸಂಪರ್ಕದಲ್ಲೂ ಇಲ್ಲ. ಸಂಗೀತ ಉದ್ಯಮದ ವ್ಯವಹಾರಕ್ಕೆ ಸಂಬಂಧಿಸಿದ ಹಣ ಇದಾಗಿದೆ’ ಎಂದು ಗಗನ್ ಅರ್ಜಿಯಲ್ಲಿ ತಿಳಿಸಿದ್ದರು.