ಬೆಂಗಳೂರು: ರಾಜಕೀಯ ಪಕ್ಷಗಳು ರ್ಯಾಲಿಗಳ ಸಂದರ್ಭದಲ್ಲಿ ಕಡ್ಡಾಯವಾಗಿ ಕೋವಿಡ್ ಮಾರ್ಗದರ್ಶಿ ಸೂತ್ರಗಳನ್ನು(ಎಸ್ಒಪಿ) ಪಾಲಿಸಬೇಕು ಎಂದು ಹೈಕೋರ್ಟ್ ಹೇಳಿದೆ. ನ್ಯಾಯಾಲಯಕ್ಕೆ ಹಾಜರಾಗುವಂತೆ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಅವರಿಗ ಮತ್ತೆ ನೋಟಿಸ್ ಜಾರಿಗೊಳಿಸಿದೆ.
ಲೆಟ್ಜ್ಕಿಟ್ ಫೌಂಡೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ರಾಜಕೀಯ ಪಕ್ಷಗಳು ರ್ಯಾಲಿ ಅಥವಾ ಸಭೆಗಳನ್ನು ನಡೆಸುವಾಗ ತಮ್ಮ ಕಾರ್ಯಕರ್ತರಿಗೆ ಕೋವಿಡ್ ನಿಯಮ ಪಾಲಿಸಲು ಸೂಚನೆ ನೀಡಬೇಕು. ಈ ಸಂಬಂಧ ಪಿಐಎಲ್ಗೆ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಮಾ.1ಕ್ಕೆ ಮುಂದೂಡಿತು.