‘ಶಾಶ್ವತ ಮಾನ್ಯತೆ ಇದ್ದರೂ ಶೈಕ್ಷಣಿಕ ವರ್ಷದ ಅಂತ್ಯದಲ್ಲಿ ಸರ್ಕಾರವು ನಮ್ಮ ಶಾಲೆಗಳ ಮಾನ್ಯತೆ ಹಿಂಪಡೆದಿದೆ. ಹೀಗಾಗಿ, ನಮ್ಮ ಶಾಲೆಯಲ್ಲಿ ಕಲಿತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೇರೆ ಶಾಲೆಗಳಲ್ಲಿ ಪರೀಕ್ಷೆ ಬರೆಸಲಾಗಿದೆ. ಇದರಿಂದ, ಪರೀಕ್ಷಾ ಫಲಿತಾಂಶ ಪಟ್ಟಿ ಹಾಗೂ ಅಂಕಪಟ್ಟಿಯಲ್ಲಿ ನಮ್ಮ ಶಾಲೆಗಳ ಹೆಸರನ್ನು ಕೈಬಿಡುವ ಸಾಧ್ಯತೆ ಇದೆ. ಆದ್ದರಿಂದ, ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು' ಎಂದು ಅರ್ಜಿದಾರರು ಕೋರದ್ದರು. ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ ವಾದ ಮಂಡಿಸಿದ್ದರು.