ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್.ಪಾಟೀಲ ವಾದ ಮಂಡಿಸಿ,‘ಬಿಸಿಐನ ಹಾಲಿ ಪದಾಧಿಕಾರಿಗಳ ಅಧಿಕಾರದ ಅವಧಿ 2022ರ ಏಪ್ರಿಲ್ 16ರವರೆಗೂ ಇದೆ. ಹಾಗಿರುವಾಗ, ಅವಧಿ ಮುಗಿಯುವ 4 ತಿಂಗಳು ಮುಂಚಿತವಾಗಿಯೇ ತರಾತುರಿಯಲ್ಲಿ ಚುನಾವಣೆ ನಡೆಸುವ ಅಗತ್ಯವಿಲ್ಲ. ಅದರಲ್ಲೂ ಸದಸ್ಯರಿಗೆ ಯಾವುದೇ ಸೂಚನೆ ನೀಡದೆ ಚುನಾವಣಾ ಸಭೆ ನಡೆಸಲಾಗಿದೆ. ಆದ್ದರಿಂದ, ಚುನಾವಣೆಗೆ ತಡೆ ನೀಡಬೇಕು’ ಎಂದು ಕೋರಿದರು.