ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆರ್. ಸುಬ್ರಹ್ಮಣ್ಯ ‘ಬಹಳಷ್ಟು ಕಡೆ ಸ್ಮಶಾನಕ್ಕೆ ಈಗಾಗಲೇ ಜಾಗ ನೀಡಲಾಗಿದೆ. ಕೆಲವೆಡೆ ಸರ್ಕಾರಿ ಜಮೀನು ಲಭ್ಯವಿಲ್ಲ. ಖರಾಬು ಭೂಮಿಯಿದ್ದರೂ ಅದನ್ನು ನೀಡಲಾಗದು. ಭೂಮಿ ಖರೀದಿ ಮಾಡಿ ಸ್ಮಶಾನಕ್ಕೆ ಜಾಗ ಒದಗಿಸಬೇಕಿದೆ. ಹಾಗಾಗಿ,ಅರ್ಜಿ ಸಂಬಂಧ ಹೈಕೋರ್ಟ್ ನೀಡಿರುವ ಆದೇಶ ಪಾಲನೆಗೆ ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.