<p><strong>ನವದೆಹಲಿ: </strong>ಯಡಿಯೂರಪ್ಪ ಅವರ ಕುಟುಂಬ ಸದಸ್ಯರು ಮಾರಿಷಿಯಸ್ ಗೆ ತೆರಳಿ ಅಕ್ರಮ ಹಣವನ್ನು ಇರಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ಈ ಆರೋಪವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.</p>.<p>ಇಲ್ಲಿನ ಕರ್ನಾಟಕ ಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಪ್ರಮುಖ ಶಾಸಕರೇ ಮಾಡಿರುವ ಈ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯ ನೇತೃತ್ವದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/basanagouda-patil-yatnal-statement-on-yeddyurappa-and-family-politics-805501.html"><strong>ಯಡಿಯೂರಪ್ಪ ಕುಟುಂಬದವರೇ ಹಾವು, ಚೇಳು: ಶಾಸಕ ಬಸನಗೌಡ ಪಾಟೀಲ ಯತ್ನಾಳ</strong></a></p>.<p>'ನ ಖಾವೂಂಗಾ ನ ಖಾನೆದೂಂಗಾ' (ನಾನೂ ತಿನ್ನುವುದಿಲ್ಲ ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ) ಎಂಬ ತಮ್ಮ ಹೇಳಿಕೆಗೆ ಪ್ರಧಾನಿ ಬದ್ಧವಾಗಿರಬೇಕು ಎಂದು ಅವರು ಕೋರಿದರು.</p>.<p>ಯಡಿಯೂರಪ್ಪ ಅವರ ಮನೆಯವರೇ ಹಾವು, ಚೇಳುಗಳ ತರಹ ಕಾಡುತ್ತಿದ್ದಾರೆಯೇ ವಿನಾ ಬೇರೆ ಯಾರೂ ಅಲ್ಲ ಎಂದೂ ಯತ್ನಾಳ ಅವರೇ ಹೇಳಿದ್ದಾರೆ. ಅವರದೇ ಪಕ್ಷದ ಹಿರಿಯ ಶಾಸಕರೊಬ್ಬರು ನೀಡಿರುವ ಇಂಥ ಆಘಾತಕಾರಿ ಹೇಳಿಕೆ ಬಗ್ಗೆ ಬಿಜೆಪಿ ನಿರ್ಲಕ್ಷ್ಯ ವಹಿಸಬಾರದು ಎಂದು ಅವರು ತಿಳಿಸಿದರು.</p>.<p>ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಇಲ್ಲಿಗೆ ಬಂದಿದ್ದಾಗಿ ಹೇಳಿದ ಸಿದ್ದರಾಮಯ್ಯ, ಪಕ್ಷದ ಇತರ ಮುಖಂಡರಾದ ಕೆ.ಸಿ.ವೇಣುಗೋಪಾಲ್, ಎ.ಕೆ.ಆಂಟನಿ ಅವರನ್ನೂ ಭೇಟಿ ಮಾಡುವುದಾಗಿ ತಿಳಿಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಯಡಿಯೂರಪ್ಪ ಅವರ ಕುಟುಂಬ ಸದಸ್ಯರು ಮಾರಿಷಿಯಸ್ ಗೆ ತೆರಳಿ ಅಕ್ರಮ ಹಣವನ್ನು ಇರಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ಈ ಆರೋಪವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.</p>.<p>ಇಲ್ಲಿನ ಕರ್ನಾಟಕ ಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಪ್ರಮುಖ ಶಾಸಕರೇ ಮಾಡಿರುವ ಈ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯ ನೇತೃತ್ವದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/basanagouda-patil-yatnal-statement-on-yeddyurappa-and-family-politics-805501.html"><strong>ಯಡಿಯೂರಪ್ಪ ಕುಟುಂಬದವರೇ ಹಾವು, ಚೇಳು: ಶಾಸಕ ಬಸನಗೌಡ ಪಾಟೀಲ ಯತ್ನಾಳ</strong></a></p>.<p>'ನ ಖಾವೂಂಗಾ ನ ಖಾನೆದೂಂಗಾ' (ನಾನೂ ತಿನ್ನುವುದಿಲ್ಲ ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ) ಎಂಬ ತಮ್ಮ ಹೇಳಿಕೆಗೆ ಪ್ರಧಾನಿ ಬದ್ಧವಾಗಿರಬೇಕು ಎಂದು ಅವರು ಕೋರಿದರು.</p>.<p>ಯಡಿಯೂರಪ್ಪ ಅವರ ಮನೆಯವರೇ ಹಾವು, ಚೇಳುಗಳ ತರಹ ಕಾಡುತ್ತಿದ್ದಾರೆಯೇ ವಿನಾ ಬೇರೆ ಯಾರೂ ಅಲ್ಲ ಎಂದೂ ಯತ್ನಾಳ ಅವರೇ ಹೇಳಿದ್ದಾರೆ. ಅವರದೇ ಪಕ್ಷದ ಹಿರಿಯ ಶಾಸಕರೊಬ್ಬರು ನೀಡಿರುವ ಇಂಥ ಆಘಾತಕಾರಿ ಹೇಳಿಕೆ ಬಗ್ಗೆ ಬಿಜೆಪಿ ನಿರ್ಲಕ್ಷ್ಯ ವಹಿಸಬಾರದು ಎಂದು ಅವರು ತಿಳಿಸಿದರು.</p>.<p>ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಇಲ್ಲಿಗೆ ಬಂದಿದ್ದಾಗಿ ಹೇಳಿದ ಸಿದ್ದರಾಮಯ್ಯ, ಪಕ್ಷದ ಇತರ ಮುಖಂಡರಾದ ಕೆ.ಸಿ.ವೇಣುಗೋಪಾಲ್, ಎ.ಕೆ.ಆಂಟನಿ ಅವರನ್ನೂ ಭೇಟಿ ಮಾಡುವುದಾಗಿ ತಿಳಿಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>