<p><strong>ಬೆಂಗಳೂರು</strong>: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಶಾಲೆಗಳನ್ನು ಈಗಾಗಲೇ ಮುಚ್ಚಿದ್ದು, 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.</p>.<p>ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ಪ್ರಕಟಿಸಿದಂತೆ ಜೂನ್ 14ರವರೆಗೆ ರಜೆ ನೀಡಲಾಗಿದೆ. ಈ ತರಗತಿಗಳಿಗೆ ಜೂನ್ 15 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಮಾತ್ರ ರಜೆ ನೀಡಲಾಗಿದೆ. ಈ ಶಾಲೆಗಳಲ್ಲಿ 8 ರಿಂದ 10ರವರೆಗಿನ ತರಗತಿಗಳು ಜೂನ್ 15 ರಿಂದ ಆರಂಭವಾಗಲಿದೆ.</p>.<p>ಜೂನ್ 1 ರಿಂದ 14ರವರೆಗೆ 2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪುನರ್ ಮನನ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ಜೂನ್ 21ರಿಂದ ಜುಲೈ 5ರವರೆಗೆ ನಿಗದಿಯಾಗಿವೆ.</p>.<p>‘ಬೇಸಿಗೆ ರಜೆ ಅವಧಿಯಲ್ಲಿ ಪ್ರೌಢ ಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು. ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಶಾಲೆಗಳನ್ನು ಈಗಾಗಲೇ ಮುಚ್ಚಿದ್ದು, 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.</p>.<p>ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ಪ್ರಕಟಿಸಿದಂತೆ ಜೂನ್ 14ರವರೆಗೆ ರಜೆ ನೀಡಲಾಗಿದೆ. ಈ ತರಗತಿಗಳಿಗೆ ಜೂನ್ 15 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಮಾತ್ರ ರಜೆ ನೀಡಲಾಗಿದೆ. ಈ ಶಾಲೆಗಳಲ್ಲಿ 8 ರಿಂದ 10ರವರೆಗಿನ ತರಗತಿಗಳು ಜೂನ್ 15 ರಿಂದ ಆರಂಭವಾಗಲಿದೆ.</p>.<p>ಜೂನ್ 1 ರಿಂದ 14ರವರೆಗೆ 2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪುನರ್ ಮನನ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ಜೂನ್ 21ರಿಂದ ಜುಲೈ 5ರವರೆಗೆ ನಿಗದಿಯಾಗಿವೆ.</p>.<p>‘ಬೇಸಿಗೆ ರಜೆ ಅವಧಿಯಲ್ಲಿ ಪ್ರೌಢ ಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು. ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>