ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ದೊಡ್ಡ ನಗರಗಳಲ್ಲಿ ಆಮ್ಲಜನಕದ ಕೊರತೆ ಆಗಿರುವುದು ಸತ್ಯ. ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲೂ ಕೇಂದ್ರ ಮುತುವರ್ಜಿ ವಹಿಸಿದೆ. ಆರೋಗ್ಯ ಸಚಿವರು ನಿರಂತರ ಸಂರ್ಪಕದಲ್ಲಿದ್ದಾರೆ. ಬಳ್ಳಾರಿಯ ಕಾರ್ಖಾನೆಗಳಲ್ಲಿ ತಯಾರಾಗುತ್ತಿರುವ ಆಕ್ಸಿಜನ್ ಪಡೆಯಲು ಮಾತುಕತೆ ನಡೆದಿದೆ’ ಎಂದರು.