<p><strong>ಹುಬ್ಬಳ್ಳಿ:</strong> ‘ಆಕ್ಸಿಜನ್ ದೊರೆಯುತ್ತಿಲ್ಲ ಎಂದು ಯಾರೂ ಭಯಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ಜನಕ ಪೂರೈಸಲು ಕ್ರಮ ವಹಿಸಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಹೇಳಿದರು.</p>.<p>ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ದೊಡ್ಡ ನಗರಗಳಲ್ಲಿ ಆಮ್ಲಜನಕದ ಕೊರತೆ ಆಗಿರುವುದು ಸತ್ಯ. ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲೂ ಕೇಂದ್ರ ಮುತುವರ್ಜಿ ವಹಿಸಿದೆ. ಆರೋಗ್ಯ ಸಚಿವರು ನಿರಂತರ ಸಂರ್ಪಕದಲ್ಲಿದ್ದಾರೆ. ಬಳ್ಳಾರಿಯ ಕಾರ್ಖಾನೆಗಳಲ್ಲಿ ತಯಾರಾಗುತ್ತಿರುವ ಆಕ್ಸಿಜನ್ ಪಡೆಯಲು ಮಾತುಕತೆ ನಡೆದಿದೆ’ ಎಂದರು.</p>.<p>‘ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಅಗತ್ಯವಿದ್ದಷ್ಟು ಲಸಿಕೆ ಪೂರೈಕೆ ಮಾಡುತ್ತಿದೆ. ರೆಮ್ಡಿಸಿವಿರ್ ಕೋವಿಡ್ಗೆ ಅಂತಿಮ ಪರಿಹಾರವಲ್ಲ. ಅದು ಕೊರತೆಯಾಗಿದೆ ಎಂದು ಕೆಲವರು ಗಾಬರಿ ಹುಟ್ಟಿಸುತ್ತಿದ್ದಾರೆ. ಕೋವಿಡ್ ಬಗ್ಗೆ ಭಯಪಡುವ ಅಗತ್ಯವಿಲ್ಲ. ಆದರೆ, ಜಾಗೃತರಾಗಿರಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಆಕ್ಸಿಜನ್ ದೊರೆಯುತ್ತಿಲ್ಲ ಎಂದು ಯಾರೂ ಭಯಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ಜನಕ ಪೂರೈಸಲು ಕ್ರಮ ವಹಿಸಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಹೇಳಿದರು.</p>.<p>ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ದೊಡ್ಡ ನಗರಗಳಲ್ಲಿ ಆಮ್ಲಜನಕದ ಕೊರತೆ ಆಗಿರುವುದು ಸತ್ಯ. ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲೂ ಕೇಂದ್ರ ಮುತುವರ್ಜಿ ವಹಿಸಿದೆ. ಆರೋಗ್ಯ ಸಚಿವರು ನಿರಂತರ ಸಂರ್ಪಕದಲ್ಲಿದ್ದಾರೆ. ಬಳ್ಳಾರಿಯ ಕಾರ್ಖಾನೆಗಳಲ್ಲಿ ತಯಾರಾಗುತ್ತಿರುವ ಆಕ್ಸಿಜನ್ ಪಡೆಯಲು ಮಾತುಕತೆ ನಡೆದಿದೆ’ ಎಂದರು.</p>.<p>‘ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಅಗತ್ಯವಿದ್ದಷ್ಟು ಲಸಿಕೆ ಪೂರೈಕೆ ಮಾಡುತ್ತಿದೆ. ರೆಮ್ಡಿಸಿವಿರ್ ಕೋವಿಡ್ಗೆ ಅಂತಿಮ ಪರಿಹಾರವಲ್ಲ. ಅದು ಕೊರತೆಯಾಗಿದೆ ಎಂದು ಕೆಲವರು ಗಾಬರಿ ಹುಟ್ಟಿಸುತ್ತಿದ್ದಾರೆ. ಕೋವಿಡ್ ಬಗ್ಗೆ ಭಯಪಡುವ ಅಗತ್ಯವಿಲ್ಲ. ಆದರೆ, ಜಾಗೃತರಾಗಿರಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>