‘ಈಗ ಪ್ರಕರಣವು ನ್ಯಾಯಾಲಯದ ಮುಂದಿದೆ. ನ್ಯಾಯಾಲಯವು ನೀಡುವ ತೀರ್ಪಿನ ಮೇಲೆ ನಂಬಿಕೆ ಇಡಬೇಕಾಗುತ್ತದೆ. ಆದರೆ, ಈ ವಿವಾದದಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಆಗಲಿದೆ. ದ್ವೇಷ, ಸಿಟ್ಟು ಮನಸ್ಸಿನಲ್ಲಿ ಉಳಿಯಬಹುದು. ಅದು ಯಾವುದಾದರೂ ಒಂದು ದಿನ ಸ್ಫೋಟಗೊಳ್ಳುವ ಅಪಾಯವೂ ಇದೆ. ಮುಂದಾಲೋಚನೆಯಿಂದ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವುದು ಸೂಕ್ತ. ಎಲ್ಲರೂ ಒಟ್ಟಾಗಿ ಶಾಂತಿ ಕಾಪಾಡುವುದು, ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ನಡೆಸುವುದು ಅತಿ ಮುಖ್ಯ. ಮಕ್ಕಳ ಮಧ್ಯೆ ದ್ವೇಷ, ಅಸೂಯೆ ಬೆಳೆಯಲು ಅವಕಾಶ ನೀಡಬಾರದು’ ಎಂದು ಹೇಳಿದ್ದಾರೆ.