‘ತಮಿಳು ಭಾಷೆಯಲ್ಲಿ ಮಾತನಾಡಿದ್ದ ರಹಮತ್–ಉಲ್ಲಾ, ‘ಹಿಜಾಬ್ ತೀರ್ಪಿನ ಕಾರಣಕ್ಕಾಗಿ ನ್ಯಾಯಮೂರ್ತಿಗಳ ಕೊಲೆಯಾದರೆ, ಅವರ ಸಾವಿಗೆ ಅವರೇ ಕಾರಣರಾಗುತ್ತಾರೆ. ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ ಯಾರೇ ಬಂದರೂ ನಾವು ಹೆದರುವುದಿಲ್ಲ. ಅಲ್ಲಾಹುಗೆ ಮಾತ್ರ ಹೆದರುವುದು. ನಮ್ಮ ತಾಳ್ಮೆ ಪರೀಕ್ಷಿಸಬೇಡಿ. ತಾಳ್ಮೆ ಕಳೆದುಕೊಂಡರೆ ನೀವು ಉಳಿಯುವುದಿಲ್ಲ’ ಎಂದಿದ್ದಾನೆ’ ಎಂದು ಪೊಲೀಸ್ ಅಧಿಕಾರಿ ವಿವರಿಸಿದರು.