‘ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ’ ಎಂಬ ಬಿಜೆಪಿ ನಾಯಕರ ಹೇಳಿಕೆಗೆ, ‘ಈ ವಿಷಯದಲ್ಲಿ ನಾನು ಯಾರಿಗೂ ಉತ್ತರ ಕೊಡಲು ಹೋಗುವುದಿಲ್ಲ. ಯಾರೆಲ್ಲ ರಾಜಕಾರಣ ಮಾಡುತ್ತಿದ್ದಾರೆ, ಯಾರು ಎಷ್ಟೆಷ್ಟು ಶಾಲುಗಳಿಗೆ ಆದೇಶ ಕೊಟ್ಟಿದ್ದಾರೆ ಎನ್ನುವುದೆಲ್ಲ ನನಗೆ ಗೊತ್ತಿದೆ. ಸಚಿವರ ರಾಜಕೀಯ, ಬಿಜೆಪಿ ರಾಜಕೀಯ, ಸಂಘ ಪರಿವಾರದ ರಾಜಕೀಯ, ಕಾಂಗ್ರೆಸ್ ರಾಜಕೀಯ, ಎಸ್ಡಿಪಿಐ ರಾಜಕೀಯ ಇವೆಲ್ಲ ಈಗ ಬೇಡ. ಮಕ್ಕಳ ಮನಸ್ಸಿನಲ್ಲಿ ವಿಷ ಬಿಜ ಬಿತ್ತುವುದು ಬೇಡ. ನ್ಯಾಯಾಲಯ ಕೊಡುವ ಆದೇಶಕ್ಕೆ ಎಲ್ಲರೂ ತಲೆಬಾಗಬೇಕು’ ಎಂದರು.