‘ಆರೋಪಿಗಳ ಭಾಷಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರದಾಡಿತ್ತು. ಇದನ್ನು ನೋಡಿದ್ದ ವಕೀಲರೊಬ್ಬರು ವಿಧಾನಸೌಧ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು. ಕೃತ್ಯ ನಡೆದಿದ್ದು ತಮಿಳುನಾಡು ಆಗಿದ್ದರಿಂದ, ಅಲ್ಲಿಯ ಪೊಲೀಸರಿಗೆ ಮಾಹಿತಿ ರವಾನಿಸಲಾಗಿತ್ತು. ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆಯೊಡ್ಡಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ತಮಿಳುನಾಡು ಪೊಲೀಸರು, ತಿರುನೆಲ್ವೇಲಿ ಬಳಿ ರಹಮತ್–ಉಲ್ಲಾ ಹಾಗೂ ತಂಜಾವೂರಿನಲ್ಲಿ ಜಮಾನ್ ಮುಹಮ್ಮದ್ ಅವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ’ ಎಂದು ಮೂಲಗಳು ಹೇಳಿವೆ.