ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಹಿಜಾಬ್ ಹೆಸರಿನಲ್ಲಿ ರಾಜ್ಯದಾದ್ಯಂತ ಕೋಮು ಸಂಘರ್ಷ ಸೃಷ್ಟಿಸಲು ಬಿಜೆಪಿ ಮತ್ತು ಆರ್ಎಸ್ಎಸ್ ಪ್ರಯತ್ನಿಸುತ್ತಿವೆ. ಇದಕ್ಕೆ ತಕ್ಷಣ ಕಡಿವಾಣ ಹಾಕಿ ಜನರನ್ನು ಪ್ರಚೋದಿಸುವ ವ್ಯಕ್ತಿಗಳನ್ನು ಬಂಧಿಸಬೇಕೆಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲಿ ಒತ್ತಾಯಿಸುತ್ತೇನೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.