<p><strong>ಬೆಂಗಳೂರು:</strong> ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವುದನ್ನು ಪ್ರತಿಬಂಧಿಸಿ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಹೊರಡಿಸಿರುವ ಆದೇಶ ಸೇರಿದಂತೆ ಹಿಜಾಬ್ ಕುರಿತಾದ ಎಲ್ಲ ರಿಟ್ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.</p>.<p>ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಆರಂಭವಾಗಲಿದೆ. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ಅರ್ಜಿಗಳ ವಿಚಾರಣೆ ನಡೆಸುತ್ತಿದೆ.</p>.<p>‘ಪ್ರತಿಭಟನೆ ಮಾಡುವುದು, ಬೀದಿಗಿಳಿಯುವುದು, ಘೋಷಣೆ ಕೂಗುವುದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವುದು, ವಿದ್ಯಾರ್ಥಿಗಳು ಇತರರ ಮೇಲೆ ಹಲ್ಲೆ ನಡೆಸುವುದು ಒಳ್ಳೆಯದಲ್ಲ. ವಿದ್ಯಾರ್ಥಿಗಳು ಶಾಂತಿ ಕಾಪಾಡಬೇಕು’ ಎಂದು ಕೋರ್ಟ್ ಮನವಿ ಮಾಡಿತು.</p>.<p>‘ಸಾರ್ವಜನಿಕರ ಪ್ರಜ್ಞಾವಂತಿಕೆ ಮತ್ತು ಸಚ್ಚಾರಿತ್ರ್ಯದ ಮೇಲೆ ಕೋರ್ಟ್ಗೆ ಸಂಪೂರ್ಣ ನಂಬಿಕೆ ಇದೆ. ಜನ ಅದನ್ನು ಪಾಲಿಸುತ್ತಾರೆ ಎಂದು ಕೋರ್ಟ್ ಆಶಿಸುತ್ತದೆ’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವುದನ್ನು ಪ್ರತಿಬಂಧಿಸಿ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಹೊರಡಿಸಿರುವ ಆದೇಶ ಸೇರಿದಂತೆ ಹಿಜಾಬ್ ಕುರಿತಾದ ಎಲ್ಲ ರಿಟ್ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.</p>.<p>ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಆರಂಭವಾಗಲಿದೆ. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ಅರ್ಜಿಗಳ ವಿಚಾರಣೆ ನಡೆಸುತ್ತಿದೆ.</p>.<p>‘ಪ್ರತಿಭಟನೆ ಮಾಡುವುದು, ಬೀದಿಗಿಳಿಯುವುದು, ಘೋಷಣೆ ಕೂಗುವುದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವುದು, ವಿದ್ಯಾರ್ಥಿಗಳು ಇತರರ ಮೇಲೆ ಹಲ್ಲೆ ನಡೆಸುವುದು ಒಳ್ಳೆಯದಲ್ಲ. ವಿದ್ಯಾರ್ಥಿಗಳು ಶಾಂತಿ ಕಾಪಾಡಬೇಕು’ ಎಂದು ಕೋರ್ಟ್ ಮನವಿ ಮಾಡಿತು.</p>.<p>‘ಸಾರ್ವಜನಿಕರ ಪ್ರಜ್ಞಾವಂತಿಕೆ ಮತ್ತು ಸಚ್ಚಾರಿತ್ರ್ಯದ ಮೇಲೆ ಕೋರ್ಟ್ಗೆ ಸಂಪೂರ್ಣ ನಂಬಿಕೆ ಇದೆ. ಜನ ಅದನ್ನು ಪಾಲಿಸುತ್ತಾರೆ ಎಂದು ಕೋರ್ಟ್ ಆಶಿಸುತ್ತದೆ’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>