ಹಿಜಾಬ್ ಕುರಿತು ಏಳು ರಿಟ್ ಹಾಗೂ ಎರಡು ಮಧ್ಯಂತರ ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರದಿಂದ ವಿಚಾರಣೆಗೆ ಕೈಗೆತ್ತಿ ಕೊಂಡಿದೆ. ಬುಧವಾರ ಮಧ್ಯಾಹ್ನ ಎರಡನೇ ದಿನದ ವಿಚಾರಣೆಗೆ ನಿಗದಿಪಡಿಸಲಾಗಿತ್ತು. ನಿಗದಿಯಂತೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ‘ಈ ಪ್ರಕರಣವು ಸಾಂವಿಧಾನಿಕವಾದ ಸಾಕಷ್ಟು ಸೂಕ್ಷ್ಮ ಅಂಶಗಳನ್ನು ಒಳಗೊಂಡಿರುವ ಕಾರಣ ಇವುಗಳ ವಿಚಾರಣೆ ವಿಸ್ತೃತ ನ್ಯಾಯಪೀಠದಲ್ಲೇ ನಡೆಯುವುದು ಒಳಿತು’ ಎಂದು ಅಭಿಪ್ರಾಯಪಟ್ಟಿದ್ದರು. ಅಂತಿಮವಾಗಿ ಪ್ರಕರಣವನ್ನು ಸಿಜೆಐ ನೇತೃತ್ವದ ಸಾಂವಿಧಾನಿಕ ಪೂರ್ಣಪೀಠಕ್ಕೆ ನೀಡಲಾಗಿತ್ತು.