‘ಹಿಂಸೆಗೆ ಇಳಿದರೆ ಕ್ರಮ ನಿಶ್ಚಿತ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ,ರಾಜ್ಯದ ಕಮಿಷನರ್ಗಳು, ಐಜಿಪಿಗಳು ಹಾಗೂ ಎಲ್ಲ ಜಿಲ್ಲೆಗಳ ಎಸ್ಪಿ ಜೊತೆ ಸೋಮವಾರ ವಿಡಿಯೊ ಕಾನ್ಫರೆನ್ಸ್ ನಡೆಸಿದ ಪ್ರವೀಣ್ ಸೂದ್, ‘ಕೋಮು ವಿಚಾರವಾಗಿ ಗಲಾಟೆಗಳು ನಡೆದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು’ ಎಂದು ಎಚ್ಚರಿಸಿದ್ದಾರೆ.