‘ಕಲ್ಲಂಗಡಿ ಒಡೆದವರ ಮೇಲೆ ಮಾತ್ರವಲ್ಲ, ತಲೆ ಒಡೆದವರ ಮೇಲೂ ನಿಮ್ಮ ಕನಿಕರ ಇರಲಿ’ ಎಂಬ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಎಚ್ಡಿಕೆ, ‘ಇಂತಹ ಹೇಳಿಕೆ ನೀಡಲು ನಾಚಿಕೆ ಆಗಬೇಕು. ನುಗ್ಗಿಕೇರಿ ಘಟನೆಯಲ್ಲಿ ಜೀವ ಹೋಗಿದ್ದರೆ ಯಾರು ಜವಾಬ್ದಾರಿ? ಕಳೆದ ಜನವರಿ–ಫೆಬ್ರುವರಿಯಲ್ಲಿ ರಾಜ್ಯದಲ್ಲಿ 250ಕ್ಕೂ ಕೊಲೆಗಳು ಆಗಿವೆ. ಮೊದಲು ಅವುಗಳ ಕಡೆ ಗಮನ ಕೊಡಿ’ ಎಂದರು.