ಬಹುರೂಪಿ ರಂಗೋತ್ಸವದಲ್ಲಿ ಅವರು ಆಡಿರುವ ಮಾತುಗಳ ಬಗ್ಗೆ ವ್ಯಾಪಕ ಟೀಕೆಗಳು ಬಂದಿದ್ದವು. ಅದಕ್ಕೆ ಪ್ರಕಟಣೆಯ ಮೂಲಕ ಸ್ಪಷ್ಟನೆ ನೀಡಿರುವ ಕಣ್ಣನ್, ‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ. ನಿತ್ಯ ಜೀವನದಲ್ಲಿ ಹಾಸ್ಯಪ್ರಜ್ಞೆಯೊಂದಿಗೆ ವಿಚಾರಗಳನ್ನು ಹಂಚಿಕೊಳ್ಳುವ ಪ್ರವೃತ್ತಿಯುಳ್ಳವನು ಎಂಬುದನ್ನು ನನ್ನನ್ನು ಹತ್ತಿರದಿಂದ ಕಂಡವರಿಗೆ ಗೊತ್ತಿರುವ ವಿಚಾರ. ನಾನು ಯಾವಾಗಲೂ ಜಾತಿ, ಧರ್ಮ, ಮತ, ಪಂಥಗಳ ಆಚೆಗೆ ಆಲೋಚಿಸಿ ಬದುಕುತ್ತಿರುವವನು. ಹಾಸ್ಯದ ಧಾಟಿಯಲ್ಲಿ ನಾನಾಡುವ ಮಾತುಗಳಲ್ಲಿ ಯಾವುದೇ ದುರುದ್ದೇಶವಿರುವುದಿಲ್ಲ, ಅದಕ್ಕೆ ನನ್ನ ಬದುಕೇ ಉತ್ತರವಾಗಿದೆ’ ಎಂದಿದ್ದಾರೆ.