ವಿಧಾನಸಭೆಯಲ್ಲಿ ಶುಕ್ರವಾರ, ವಿವಿಧ ಇಲಾಖೆಗಳ ಅನುದಾನಗಳ ಬೇಡಿಕೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ರಾಜ್ಯದ ಇತರ ಭಾಗಗಳ ಅಭಿವೃದ್ಧಿಗೆ ಒತ್ತು ನೀಡಿರುವುದನ್ನು ಸ್ವಾಗತಿಸುತ್ತೇನೆ. ನಮ್ಮ ಭಾಗದಲ್ಲಿ ಅತಿ ಹೆಚ್ಚು ಮಳೆ ಆಗುವುದರಿಂದ ಪ್ರತಿ ವರ್ಷವೂ ರಸ್ತೆಗಳು ಹಾಳಾಗುತ್ತಿವೆ. ಇದಲ್ಲದೇ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಆಗಬೇಕಾಗಿದೆ’ ಎಂದರು.