ಬೆಂಗಳೂರಿನ ಮುಖ್ಯಮಂತ್ರಿ ಅವರ ಗೃಹಕಚೇರಿ ಕೃಷ್ಣಾದಲ್ಲಿ ಅವರನ್ನು ಭೇಟಿ ಮಾಡಿದಎಚ್ಕೆಸಿಸಿಐ ಅಧ್ಯಕ್ಷ ಪ್ರಶಾಂತ ಮಾನಕರ, ಗೌರವ ಕಾರ್ಯದರ್ಶಿ ಶರಣು ಪಪ್ಪಾ ಅವರಿದ್ದ ನಿಯೋಗ, ‘2020ರಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವ ಮಹಾನಗರ ಪಾಲಿಕೆ ಮತ್ತೆ ಶೇ 15ರಷ್ಟು ಪ್ರಸಕ್ತ ವರ್ಷ ಹೆಚ್ಚಳ ಮಾಡಿದೆ. ಇದರಿಂದಾಗಿ ಮೊದಲೇ ಕೊರೊನಾ ಲಾಕ್ಡೌನ್ನಿಂದ ತತ್ತರಿಸಿರುವ ವ್ಯಾಪಾರಸ್ಥರು ಹಾಗೂ ಆಸ್ತಿಗಳ ಮಾಲೀಕರಿಗೆ ತೊಂದರೆಯಾಗಲಿದೆ. ಮಹಾನಗರ ಪಾಲಿಕೆಯ ಆಡಳಿತ ಮಂಡಳಿ ಇಲ್ಲದಿದ್ದ ಸಂದರ್ಭದಲ್ಲಿ ಆಯುಕ್ತರು ಏಕಾಏಕಿ ತೆರಿಗೆ ಹೆಚ್ಚಳದ ನಿರ್ಣಯ ಕೈಗೊಂಡಿದ್ದು ಸರಿಯಲ್ಲ. ಶೇ 15ರಷ್ಟು ಹೆಚ್ಚಳ ಎಂದಿದ್ದರೂ ವಾಸ್ತವವಾಗಿ ಅದಕ್ಕಿಂತಲೂ ಹೆಚ್ಚಿನ ತೆರಿಗೆ ಆಕರಣೆ ಮಾಡಲಾಗುತ್ತಿದೆ’ ಎಂದು ದೂರಿದರು.