ನಗರದಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್ಎಸ್ಎಸ್ಗೂ ಇದಕ್ಕೂ ಸಂಬಂಧವಿಲ್ಲ. ಎಸ್ಟಿ ಹೋರಾಟದ ಹಿಂದೆ ಆರ್ಎಸ್ಎಸ್ ಇದೆ ಎನ್ನುವುದು ಸತ್ಯಕ್ಕೆ ದೂರವಾದುದು. ಅವರಿಗೆ ಎಲ್ಲಿ ಆರ್ಎಸ್ಎಸ್ ಕಂಡಿತೋ ಗೊತ್ತಿಲ್ಲ. ಕುರುಬರಿಗಾಗಿ ಕುರುಬರೇ ನಡೆಸುವ ಹೋರಾಟ ಇದು. ಅವರ ಜತೆ ಮಾತನಾಡುತ್ತೇವೆ. ಅವರು ಹೇಳಿರುವುದರಲ್ಲಿ ನಿಜ ಇದ್ದರೆ ಒಪ್ಪಿಕೊಳ್ಳುತ್ತೇವೆ. ತಪ್ಪು ಮಾಹಿತಿ ಅವರಿಗೆ ಬಂದಿದ್ದರೆ ಸರಿಪಡಿಸುತ್ತೇವೆ’ ಎಂದು ತಿಳಿಸಿದರು.