ಬೆಂಗಳೂರು:ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಲೆಗಳಿಗೆ ನ.19 ಮತ್ತು 20ರಂದು ರಜೆ ಘೋಷಿಸಲಾಗಿದೆ. ಬೆಂಗಳೂರು ನಗರ ಮತ್ತು ರಾಮನಗರದಲ್ಲಿ ನ.19ರಂದು ರಜೆ ನೀಡಲಾಗಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್. ವಿಶಾಲ್ ಪತ್ರ ಬರೆದಿದ್ದಾರೆ.
ಮಳೆಯಿಂದ ವಿದ್ಯಾರ್ಥಿಗಳಿಗೆ ಶಾಲೆಗೆ ಬಂದು ಹೋಗಲು ತೊಂದರೆ ಆಗುತ್ತಿರಬಹುದು. ರಜೆ ಘೋಷಣೆ ಮಾಡಿದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೆ ಒಳಪಟ್ಟು ರಜೆ ಘೋಷಣೆ ಮಾಡಬಹುದು ಎಂದು ಅವರು ಸೂಚಿಸಿದ್ದಾರೆ.