<p><strong>ಬೆಂಗಳೂರು</strong>: ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಮೋಟಾರು ವಾಹನ ಕಾಯ್ದೆ, ಮೋಟಾರು ವಾಹನ ನಿಯಮ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸುವಂತೆ ಗೃಹ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.</p>.<p>ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡುವವರಿಗೆ ₹ 500ರಿಂದ ₹ 1,000ದವರೆಗೆ ದಂಡ ವಿಧಿಸಬೇಕು. ರಸ್ತೆಯಲ್ಲಿ ವಾಹನ ನಿಲುಗಡೆ ಮಾಡಿ ಸಂಚಾರಕ್ಕೆ ಅಡ್ಡಿಪಡಿಸುವವರಿಗೆ ಪ್ರತಿ ಗಂಟೆಗೆ ₹ 50ರಂತೆ ದಂಡ ವಿಧಿಸಬೇಕು ಎಂದು ಎಲ್ಲ ಪೊಲೀಸ್ ಕಮಿಷನರ್ಗಳು, ಎಸ್ಪಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.</p>.<p>ಪಾದಚಾರಿ ಮಾರ್ಗಗಳ ಅತಿಕ್ರಮಣ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಬಳಿಕ ಹೈಕೋರ್ಟ್ ನೀಡಿರುವ ಆದೇಶದ ಅನುಸಾರ ಈ ಸುತ್ತೋಲೆ ಹೊರಡಿಸಲಾಗಿದೆ. ಪಾದಚಾರಿ ಮಾರ್ಗಗಳ ಮೇಲೆ ವಾಹನ ನಿಲುಗಡೆ ಮಾಡುವವರು, ರಸ್ತೆ ವಾಹನ ನಿಲ್ಲಿಸುವವರು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿ ರೀತಿಯಲ್ಲಿ ವಾಹನ ನಿಲುಗಡೆ ಮಾಡಿ, ಹೋಗುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಮೋಟಾರು ವಾಹನ ಕಾಯ್ದೆ, ಮೋಟಾರು ವಾಹನ ನಿಯಮ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸುವಂತೆ ಗೃಹ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.</p>.<p>ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡುವವರಿಗೆ ₹ 500ರಿಂದ ₹ 1,000ದವರೆಗೆ ದಂಡ ವಿಧಿಸಬೇಕು. ರಸ್ತೆಯಲ್ಲಿ ವಾಹನ ನಿಲುಗಡೆ ಮಾಡಿ ಸಂಚಾರಕ್ಕೆ ಅಡ್ಡಿಪಡಿಸುವವರಿಗೆ ಪ್ರತಿ ಗಂಟೆಗೆ ₹ 50ರಂತೆ ದಂಡ ವಿಧಿಸಬೇಕು ಎಂದು ಎಲ್ಲ ಪೊಲೀಸ್ ಕಮಿಷನರ್ಗಳು, ಎಸ್ಪಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.</p>.<p>ಪಾದಚಾರಿ ಮಾರ್ಗಗಳ ಅತಿಕ್ರಮಣ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಬಳಿಕ ಹೈಕೋರ್ಟ್ ನೀಡಿರುವ ಆದೇಶದ ಅನುಸಾರ ಈ ಸುತ್ತೋಲೆ ಹೊರಡಿಸಲಾಗಿದೆ. ಪಾದಚಾರಿ ಮಾರ್ಗಗಳ ಮೇಲೆ ವಾಹನ ನಿಲುಗಡೆ ಮಾಡುವವರು, ರಸ್ತೆ ವಾಹನ ನಿಲ್ಲಿಸುವವರು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿ ರೀತಿಯಲ್ಲಿ ವಾಹನ ನಿಲುಗಡೆ ಮಾಡಿ, ಹೋಗುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>