ರಾಜ್ಯದ ಎಲ್ಲಾ ಕಾರಾಗೃಹಗಳನ್ನು ಸ್ಯಾನಿಟೈಸ್ ಮಾಡುವಂತೆ ಸೂಚಿಸಲಾಗಿದೆ. ಜೈಲುಗಳಲ್ಲಿ ಪಾಸಿಟಿವ್ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸೋಂಕಿತ ಕೈದಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ರಾಜ್ಯದ ಎಲ್ಲ ಕಾರಾಗೃಹಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ಅವರು ಹೇಳಿದರು.