ಸುದ್ದಿಗಾರರ ಜೊತೆ ಶನಿವಾರ ಮಾತ ನಾಡಿದ ಅವರು, ‘ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ಇತ್ತೀಚೆಗೆ ತಡರಾತ್ರಿವರೆಗೂ ಕ್ಲಬ್, ಪಬ್ಗಳು ಕಾರ್ಯಾಚರಿಸುತ್ತಿವೆ. ಅದರ ವಿರುದ್ಧ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೆ. ಕೆ.ಆರ್. ಪುರ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಹೀಗಾಗಿ, ನಂದೀಶ್ ಅವರನ್ನು ಪೊಲೀಸ್ ಕಮಿಷನರ್ ಅಮಾನತು ಮಾಡಿದ್ದರು. ಆದರೆ, ನಂದೀಶ್ಗೆ ಹೃದಯಾಘಾತ ಆಗಿದೆ. ಇದೊಂದು ದುರದೃಷ್ಟಕರ ಘಟನೆ. ಇದಕ್ಕೆ ಬೇರೆ ಅರ್ಥಕಲ್ಪಿಸುವುದು ಬೇಡ’ ಎಂದರು.