ದೇಶದ ಹೆಮ್ಮೆಯ ಸೇನಾನಿಯಾದ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸುವಂತಹ ಬರಹಗಳನ್ನು ಕೆಲವು ದುಷ್ಕರ್ಮಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಡುತ್ತಿದ್ದಾರೆ. ಇಂತಹ ದೇಶವಿರೋಧಿಗಳನ್ನು ಪತ್ತೆಹಚ್ಚಿ, ತಕ್ಕ ಶಿಕ್ಷೆ ವಿಧಿಸಬೇಕಿದೆ. ಈ ರೀತಿಯ ವಿಕೃತ ಮನಸ್ಸಿನವರನ್ನು ವಿಳಂಬ ಮಾಡದೆ ಪತ್ತೆಹಚ್ಚಿ, ಕ್ರಮ ಜರುಗಿಸುವಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.