ಗುರುವಾರ ಬೆಳಿಗ್ಗೆ ನಗರದಿಂದ ಶಿವಮೊಗ್ಗಕ್ಕೆ ಹೊರಡುವ ಮೊದಲ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಘಟನೆಯನ್ನು ಬೇರೆ ಬೇರೆ ಆಯಾಮಗಳಲ್ಲಿ ಸಂಪೂರ್ಣವಾಗಿ ತನಿಖೆ ನಡೆಸಲಾಗುವುದು. ಘಟನೆಯ ಹಿಂದೆ ಮತೀಯ ಸಂಘಟನೆಗಳಿವೆ ಎಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ, ಮತೀಯ ಸಂಘಟನೆಗಳ ಜೊತೆ ಕೃತ್ಯದಲ್ಲಿ ಭಾಗಿಯಾದವರು ಯಾವ ರೀತಿ ಗುರುತಿಸಿಕೊಂಡಿದ್ದಾರೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ’ ಎಂದರು.