ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿ ಪ್ರಕರಣವನ್ನು ಟಿವಿ ಧಾರಾವಾಹಿಗೆ ಹೋಲಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ

Last Updated 27 ಮಾರ್ಚ್ 2021, 8:06 IST
ಅಕ್ಷರ ಗಾತ್ರ

ಬೆಂಗಳೂರು: ‘ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೊ ಬರುತ್ತಿದೆ.‌ ಯುವತಿ ವಿಡಿಯೊ ಬಿಡುಗಡೆ ಮಾಡಿದ್ದಾಳೆ ಎಂದು ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಪ್ರಕರಣದ ತನಿಖೆಯನ್ನು ನಿಷ್ಠುರವಾಗಿ, ನ್ಯಾಯಸಮ್ಮತವಾಗಿ ಮಾಡುತ್ತೇವೆ. ಯಾರ ಪರ, ಯಾರ ವಿರುದ್ಧ ತನಿಖೆ ಮಾಡುವುದಿಲ್ಲ. ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು,ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿ.ಡಿ ಪ್ರಕರಣದಲ್ಲಿ ಸಿ.ಡಿ, ಆಡಿಯೊ, ವಿಡಿಯೊ ಇಟ್ಟುಕೊಂಡು ಎಸ್ಐಟಿ ಕೂಲಂಕಷವಾಗಿ ತನಿಖೆ ಮಾಡಲಿದೆ. ವೈಜ್ಞಾನಿಕವಾಗಿ ಪರಿಶೀಲನೆ ಮಾಡಲಾಗುತ್ತದೆ’ ಎಂದು ಹೇಳಿದರು.

‘ಯಾವುದೇ ರೀತಿಯ ಒತ್ತಡ, ಪ್ರಭಾವ ಅಥವಾ ದಾರಿ ತಪ್ಪಿಸುವುದು ನಡೆಯುವುದಿಲ್ಲ. ಎಸ್ಐಟಿ ಕ್ರಮಬದ್ಧವಾಗಿ, ಕಾನೂನುಬದ್ಧವಾಗಿ ತನಿಖೆ ಮಾಡಲಿದೆ’ ಎಂದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT