ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಿಷೇಧವು ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ನಗರಕ್ಕೆ ಸೀಮಿತವಾಗಿರುವುದಿಲ್ಲ. ರಾಜ್ಯದ ಯಾವುದೇ ಭಾಗದಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಯ ಕೂಟಗಳನ್ನು ಆಯೋಜಿಸಲು, ಜನಜಂಗುಳಿ ಸೇರಲು ಅವಕಾಶ ನೀಡುವುದಿಲ್ಲ’ ಎಂದರು.