<p><strong>ಮಂಗಳೂರು: </strong>ಇಲ್ಲಿನ ಸಂಘಪರಿವಾರ ಮುಖಂಡರನ್ನು ಉದ್ದೇಶಿಸಿ ‘ನಿಮ್ಮ ಮೇಲೆ ಯಾವುದೇ ಕ್ರಿಮಿನಲ್ ಕೇಸ್ ಹಾಕಿದ್ರೂ, ಎಲ್ಲ ತೆಗೆದು ಹಾಕುತ್ತೇವೆ’ ಎಂದು ಸ್ವತಃ ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ಹೇಳಿರುವ ವಿವಾದಾತ್ಮಕ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.</p>.<p>ಉಡುಪಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲು ಇತ್ತೀಚೆಗೆ ಬಂದಿದ್ದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹಸಚಿವ ಬಸವರಾಜ ಬೊಮ್ಮಾಯಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವತಃ ಗೃಹ ಸಚಿವರು ಈ ಮಾತನ್ನು ಹೇಳುವಾಗ ದನಿತಗ್ಗಿಸಿ ಹೇಳುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ.</p>.<p>ಏಳು ಸೆಕೆಂಡ್ನ ವಿಡಿಯೊದಲ್ಲಿ ಈ ಹೇಳಿಕೆ ನೀಡಿದ್ದಾರೆ. ರಾಜ್ಯದ ಪೊಲೀಸ್ ಇಲಾಖೆಗೆ ಸಲಹೆ-ಸೂಚನೆ ನೀಡುತ್ತಾ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಸಚಿವರೇ ಈ ವಿವಾದಾತ್ಮಕ ಹೇಳಿಕೆ ನೀಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ವಿಶ್ವ ಹಿಂದೂ ಪರಿಷತ್ನ (ವಿಎಚ್ಪಿ) ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಎದುರು, ‘ನೋಡ್ರಿ ನಿಮ್ಮ ಮೇಲೆ ಯಾವುದೇ ಕ್ರಿಮಿನಲ್ ಕೇಸು ಹಾಕಿದ್ರೂ ತೆಗೆದು ಹಾಕುತ್ತೇವೆ’ಎಂದು ಹೇಳಿದ್ದಾರೆ.</p>.<p>ವಿಎಚ್ಪಿಯ ಶರಣ್ ಪಂಪ್ವೆಲ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಆ.12ರಂದು ನಸುಕಿನಜಾವ 2:53ಕ್ಕೆ ಗೃಹಸಚಿವರ ವಿವಾದಾತ್ಮಕ ಹೇಳಿಕೆಯ ವಿಡಿಯೊವನ್ನು ಹಂಚಿಕೊಂಡಿದ್ದಲ್ಲದೆ, ಬೆಂಗಳೂರು ಹಿಂಸಾಚಾರ ಪ್ರಕರಣದ ಕುರಿತು ಅಡಿಬರಹ ದಾಖಲಿಸಿದ್ದಾರೆ.</p>.<p>ವಿಡಿಯೊದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ವಿಶ್ವ ಹಿಂದೂ ಪರಿಷತ್ನ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಸಹಿತ ಸಂಘಪರಿವಾರದ ಮುಖಂಡರು ಇರುವುದು ಸ್ಪಷ್ಟವಾಗಿ ಗೋಚರಿಸುತ್ತದೆ.</p>.<p>ವಿಡಿಯೊದಲ್ಲಿ ವಿವಾದಾತ್ಮಕ ಹೇಳಿಕೆ ಇರುವುದು ಕಂಡುಬಂದ ನಂತರ ಎಚ್ಚೆತ್ತುಕೊಂಡ ಶರಣ್ ಪಂಪ್ವೆಲ್, ಬಳಿಕ ಆ ಟ್ವೀಟ್ನ್ನು ಅಳಿಸಿ ಹಾಕಿದ್ದಾರೆ. ಅದೇ ವೀಡಿಯೊದ ಫೋಟೊವನ್ನು ಆ.12ರಂದು ಮಧ್ಯಾಹ್ನ 3:16ಕ್ಕೆ ಮರುಟ್ವೀಟ್ ಹಾಕಿದ್ದಾರೆ.</p>.<p>ಶರಣ್ ಪಂಪ್ವೆಲ್ ತನ್ನ ಟ್ವಿಟರ್ ಖಾತೆಯಿಂದ ವಿಡಿಯೊ ಅಳಿಸಿ, ಹೊಸ ಟ್ವೀಟ್ ಮಾಡಿದರೂ ಅವರ ಹಳೆಯ ಟ್ವೀಟ್ನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಾ, ಭಾರೀ ಸದ್ದು ಎಬ್ಬಿಸಿದೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಬಗ್ಗೆ ಶರಣ್ ಪಂಪ್ವೆಲ್ ಆಗಲಿ, ಗೃಹಸಚಿವರಾಗಲಿ ಯಾವುದೇ ಹೇಳಿಕೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಇಲ್ಲಿನ ಸಂಘಪರಿವಾರ ಮುಖಂಡರನ್ನು ಉದ್ದೇಶಿಸಿ ‘ನಿಮ್ಮ ಮೇಲೆ ಯಾವುದೇ ಕ್ರಿಮಿನಲ್ ಕೇಸ್ ಹಾಕಿದ್ರೂ, ಎಲ್ಲ ತೆಗೆದು ಹಾಕುತ್ತೇವೆ’ ಎಂದು ಸ್ವತಃ ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ಹೇಳಿರುವ ವಿವಾದಾತ್ಮಕ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.</p>.<p>ಉಡುಪಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲು ಇತ್ತೀಚೆಗೆ ಬಂದಿದ್ದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹಸಚಿವ ಬಸವರಾಜ ಬೊಮ್ಮಾಯಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವತಃ ಗೃಹ ಸಚಿವರು ಈ ಮಾತನ್ನು ಹೇಳುವಾಗ ದನಿತಗ್ಗಿಸಿ ಹೇಳುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ.</p>.<p>ಏಳು ಸೆಕೆಂಡ್ನ ವಿಡಿಯೊದಲ್ಲಿ ಈ ಹೇಳಿಕೆ ನೀಡಿದ್ದಾರೆ. ರಾಜ್ಯದ ಪೊಲೀಸ್ ಇಲಾಖೆಗೆ ಸಲಹೆ-ಸೂಚನೆ ನೀಡುತ್ತಾ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಸಚಿವರೇ ಈ ವಿವಾದಾತ್ಮಕ ಹೇಳಿಕೆ ನೀಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ವಿಶ್ವ ಹಿಂದೂ ಪರಿಷತ್ನ (ವಿಎಚ್ಪಿ) ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಎದುರು, ‘ನೋಡ್ರಿ ನಿಮ್ಮ ಮೇಲೆ ಯಾವುದೇ ಕ್ರಿಮಿನಲ್ ಕೇಸು ಹಾಕಿದ್ರೂ ತೆಗೆದು ಹಾಕುತ್ತೇವೆ’ಎಂದು ಹೇಳಿದ್ದಾರೆ.</p>.<p>ವಿಎಚ್ಪಿಯ ಶರಣ್ ಪಂಪ್ವೆಲ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಆ.12ರಂದು ನಸುಕಿನಜಾವ 2:53ಕ್ಕೆ ಗೃಹಸಚಿವರ ವಿವಾದಾತ್ಮಕ ಹೇಳಿಕೆಯ ವಿಡಿಯೊವನ್ನು ಹಂಚಿಕೊಂಡಿದ್ದಲ್ಲದೆ, ಬೆಂಗಳೂರು ಹಿಂಸಾಚಾರ ಪ್ರಕರಣದ ಕುರಿತು ಅಡಿಬರಹ ದಾಖಲಿಸಿದ್ದಾರೆ.</p>.<p>ವಿಡಿಯೊದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ವಿಶ್ವ ಹಿಂದೂ ಪರಿಷತ್ನ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಸಹಿತ ಸಂಘಪರಿವಾರದ ಮುಖಂಡರು ಇರುವುದು ಸ್ಪಷ್ಟವಾಗಿ ಗೋಚರಿಸುತ್ತದೆ.</p>.<p>ವಿಡಿಯೊದಲ್ಲಿ ವಿವಾದಾತ್ಮಕ ಹೇಳಿಕೆ ಇರುವುದು ಕಂಡುಬಂದ ನಂತರ ಎಚ್ಚೆತ್ತುಕೊಂಡ ಶರಣ್ ಪಂಪ್ವೆಲ್, ಬಳಿಕ ಆ ಟ್ವೀಟ್ನ್ನು ಅಳಿಸಿ ಹಾಕಿದ್ದಾರೆ. ಅದೇ ವೀಡಿಯೊದ ಫೋಟೊವನ್ನು ಆ.12ರಂದು ಮಧ್ಯಾಹ್ನ 3:16ಕ್ಕೆ ಮರುಟ್ವೀಟ್ ಹಾಕಿದ್ದಾರೆ.</p>.<p>ಶರಣ್ ಪಂಪ್ವೆಲ್ ತನ್ನ ಟ್ವಿಟರ್ ಖಾತೆಯಿಂದ ವಿಡಿಯೊ ಅಳಿಸಿ, ಹೊಸ ಟ್ವೀಟ್ ಮಾಡಿದರೂ ಅವರ ಹಳೆಯ ಟ್ವೀಟ್ನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಾ, ಭಾರೀ ಸದ್ದು ಎಬ್ಬಿಸಿದೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಬಗ್ಗೆ ಶರಣ್ ಪಂಪ್ವೆಲ್ ಆಗಲಿ, ಗೃಹಸಚಿವರಾಗಲಿ ಯಾವುದೇ ಹೇಳಿಕೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>