‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆಮಾಡಿ ವಿಚಾರಿಸಿದರು. ಆದರೆ, ಗೃಹ ಸಚಿವರು ಈವರೆಗೂ ನನ್ನನ್ನು ಸಂಪರ್ಕಿಸಿಲ್ಲ. ಶಾಸಕ ಎಂಬ ಕಾರಣಕ್ಕಲ್ಲ ಸಹೋದ್ಯೋಗಿ ಎಂಬ ಕಾರಣಕ್ಕೂ ನನ್ನನ್ನು ಮಾತನಾಡಿಸದೇ ಇರುವುದು ನೋವು ತಂದಿದೆ. ನಾವು ಹೊಡೆಸಿಕೊಳ್ಳುವುದಕ್ಕಾಗಿಯೇ ಇರುವವರು ಎಂಬ ಭಾವನೆ ಅವರಲ್ಲಿ ಇರಬಹುದು’ ಎಂದು ಹೇಳಿದರು.