ಕಲಬುರಗಿಯ ಜ್ಞಾನ ಜ್ಯೋತಿ ಪರೀಕ್ಷಾ ಕೇಂದ್ರಕ್ಕೆ ಅನುಮತಿ ನೀಡಿದವರು ಯಾರು ಎಂಬುದು ಬಹಿರಂಗವಾಗಬೇಕು. ಪರೀಕ್ಷಾ ಕೇಂದ್ರ ತೆರೆಯುವಂತೆ ಅಲ್ಲಿನ ಸಂಸದರು ಶಿಫಾರಸು ಪತ್ರ ನೀಡಿದ್ದರು ಎಂಬ ಮಾಹಿತಿ ಇದೆ. ಅದು ನಿಜವೇ ಎಂಬುದೂ ಗೊತ್ತಾಗಬೇಕು. ಈ ವಿಚಾರಗಳ ಕುರಿತು ಗೃಹ ಸಚಿವರು ಸ್ಪಷ್ಟವಾದ ಮಾಹಿತಿ ನೀಡಬೇಕಿತ್ತು. ಆದರೆ, ಈಗ ಅವರ ಪಾತ್ರದ ಬಗ್ಗೆಯೇ ಅನುಮಾನ ಮೂಡುತ್ತಿದೆ ಎಂದರು.