ಹುಬ್ಬಳ್ಳಿ– ಅಂಕೋಲಾ ರೈಲು ಮಾರ್ಗ ಯೋಜನೆಯು ಪರಿಸರ ಸಂಬಂಧಿ ತೊಡಕುಗಳಿಂದ ನನೆಗುದಿಗೆ ಬಿದ್ದಿದೆ. ತಾಳಗುಪ್ಪ– ಹೊನ್ನಾವರ ರೈಲು ಮಾರ್ಗ ನಿರ್ಮಾಣವಾದರೆ ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸಲು ಉತ್ತಮ ಮಾರ್ಗ ಲಭಿಸುತ್ತದೆ. ಈ ಯೋಜನೆಗೂ ಪರಿಸರವಾದಿಗಳ ವಿರೋಧ ಬರಬಹುದು. ಆದ್ದರಿಂದ ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುವುದಕ್ಕಾಗಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಪರಿಸರವಾದಿಗಳ ಜತೆ ಶೀಘ್ರದಲ್ಲಿ ಸಭೆ ನಡೆಸಲಾಗುವುದು ಎಂದು ಭರವಸೆ ನೀಡಿದರು.