ಚಿಕ್ಕಮಗಳೂರು: ಕೋವಿಡ್ನಿಂದಾಗಿ ಇದೇ 21ರಿಂದ ಮೇ 4 ರವರೆಗೆ ಹೊರನಾಡಿನ ಅನ್ನಪೂರ್ಣೇಶ್ವರಿ ದೇಗುಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ದೇವರ ದರ್ಶನ, ಪೂಜೆ, ಪ್ರಸಾದ ಮತ್ತು ವಸತಿ ಎಲ್ಲದಕ್ಕೂ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ದೇವಿ ಮಂಗಳಾರತಿಯ ನೇರಪ್ರಸಾರವನ್ನು 'ಯ್ಯೂ ಟ್ಯೂಬ್'ನಲ್ಲಿ ವೀಕ್ಷಿಸಬಹುದು ಎಂದು ಕ್ಷೇತ್ರದ ಧರ್ಮದರ್ಶಿ ಜಿ.ಭೀಮೇಶ್ವರ ಜೋಶಿ ತಿಳಿಸಿದ್ದಾರೆ.