‘ಕೋವಿಡ್ ಕಾರಣದಿಂದ ಆನ್ಲೈನ್ ಮೇಳ ವೀಕ್ಷಣೆಗೆ ವ್ಯವಸ್ಥೆ ಮಾಡಿದ್ದೆವು. ವೆಬ್ಸೈಟ್, ಫೇಸ್ಬುಕ್, ಯೂಟ್ಯೂಬ್ಗಳಲ್ಲಿ ನೇರಪ್ರಸಾರವೂ ಇತ್ತು. ಬೇರೆ ರಾಜ್ಯಗಳ ರೈತರು ಸ್ಥಳೀಯ ರೈತ ಸಂಸ್ಥೆಗಳ ಸಹಾಯದಿಂದ ಅಲ್ಲಿಂದಲೇ ಮೇಳ ವೀಕ್ಷಿಸಿದರು. ಅವರ ಸಮಸ್ಯೆಗಳನ್ನು ತಮ್ಮದೇ ಭಾಷೆಯಲ್ಲಿ ಪರಿಹರಿಸಲು ವಿಜ್ಞಾನಿಗಳಿಂದ ಸಂವಾದ, ಕಾರ್ಯಾಗಾರ ಹಾಗೂ ಗೋಷ್ಠಿಗಳನ್ನು ಮೇಳದ ಐದೂ ದಿನ ನಡೆಸಿದೆವು. ಇದರಿಂದ ದೇಶವ್ಯಾಪಿ ರೈತರನ್ನು ಮೇಳ ತಲುಪಲು ಸಾಧ್ಯವಾಯಿತು’ ಎಂದು ಸಂತಸ ವ್ಯಕ್ತಪಡಿಸಿದರು.