‘ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಪ್ರಸ್ತಾವ ಸದ್ಯ ಸರ್ಕಾರದ ಮುಂದಿಲ್ಲ. ಸಚಿವ ಸಂಪುಟದ ಮುಂದೆ ಬಂದಾಗ ಬದಲಿಸಬೇಕೋ, ಬೇಡವೋ ಎಂಬ ಕುರಿತು ಉತ್ತರ ನೀಡಲಾಗುವುದು. ತಾತ್ವಿಕವಾಗಿ ಇಂಥ ವಿಚಾರಕ್ಕೆ ಹೆಚ್ಚು ಮಹತ್ವ ಕೊಡುವ ಅಗತ್ಯವಿಲ್ಲ’ ಎಂದ ಅವರು, ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 74ನೇ ಜನ್ಮದಿನ ಆಚರಿಸಿದ್ದಾರೆ. ಅವರು ನೂರು ಕಾಲ ಬದುಕಲಿ’ ಎಂದು ಪ್ರಾರ್ಥಿಸಿದರು.