'ಇದು ಅತ್ಯಂತ ಹಳೆಯ ಪವಿತ್ರವಾದ ದರ್ಗವಾಗಿತ್ತು. ಹಿಂದೂ, ಮುಸ್ಲಿಂ ಸಮುದಾಯದವರು ಅಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಯಾವುದೇ ಕಾರಣಕ್ಕೂ ತೆರವು ಮಾಡಬೇಡಿ ಎಂದು ಮುಖ್ಯಮಂತ್ರಿಯವರಲ್ಲಿ ವಿನಂತಿಸಿದ್ದೆ. ಅವರು ಅದಕ್ಕೆ ಒಪ್ಪಿಗೆಯೂ ಸೂಚಿಸಿದ್ದರು. ಆದರೆ, ರಾತ್ರೋರಾತ್ರಿ ಪೊಲೀಸ್ ಭದ್ರತೆ ಮಾಡಿಕೊಂಡು ತೆರವು ಮಾಡಿದ್ದಾರೆ. ಇದು ಮುಸ್ಲಿಮ್ ಸಮುದಾಯಕ್ಕೆ ಮಾಡಿರುವ ದೊಡ್ಡ ಅನ್ಯಾಯ. ಅವರ ಭಾವನೆ ಕೆರಳಿಸಲು ಹೀಗೆ ಮಾಡಿದ್ದಾರೆ. ಇದು ಖಂಡನೀಯ' ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.