ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡದ ಬಳಿ ರಸ್ತೆ ಭೀಕರ ಅಪಘಾತ: 9 ಮಂದಿ ಸಾವು, 13 ಜನರಿಗೆ ಗಾಯ

Last Updated 21 ಮೇ 2022, 6:24 IST
ಅಕ್ಷರ ಗಾತ್ರ

ಧಾರವಾಡ: ತಾಲ್ಲೂಕಿನ ಬಾಡ ಕ್ರಾಸ್ ಬಳಿ ಟೆಂಪೋ ಟ್ರಾಕ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 9ಜನ ಮೃತಪಟ್ಟಿದ್ದಾರೆ. 13 ಜನರಿಗೆ ಗಾಯಗಳಾಗಿವೆ.

ಮನಸೂರಿನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ರಾತ್ರಿ 2ರ ಸುಮಾರಿಗೆ ಬೆನಕನಕಟ್ಟಿಗೆ ಮರಳುತ್ತಿದ್ದರು. 21 ಜನರಿದ್ದ ವಾಹನ ನಿಗದಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು ಇದ್ದಾರೆ.

ಅನನ್ಯಾ (14), ಹರೀಶ್ (13), ಶಿಲ್ಪಾ (34), ನಿಲವ್ವ (60), ಮಧುಶ್ರೀ (20), ಮಹೇಶ್ವರ (11), ಶಂಭುಲಿಂಗಯ್ಯ (35) ಮೃತಪಟ್ಟರು.

13 ಜನರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂದ ಗ್ರಾಮೀಣ ಠಾಣೆ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT