ಬಿಬಿಎಂಪಿಯ ಮಾಜಿ ಸದಸ್ಯೆ ಮಂಜುಳಾ ನಾರಾಯಣ ಸ್ವಾಮಿ ಬುಧವಾರ ಬಿಜೆಪಿಗೆ ಸೇರ್ಪಡೆಯಾದರು. ಈ ಹಿಂದೆ ಪಾಲಿಕೆಯಲ್ಲಿ ಮುನಿರತ್ನ ಮತ್ತು ಮಂಜುಳಾ ಪರಸ್ಪರ ಆರೋಪ– ಪ್ರತ್ಯಾರೋಪ ಮಾಡಿಕೊಂಡಿದ್ದರು. ಈಗ ಬಿಜೆಪಿ ಸೇರುವ ಮೂಲಕ ಇಬ್ಬರೂ ಒಂದೇ ಪಕ್ಷ ಸೇರಿಕೊಂಡಂತಾಗಿದೆ. ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ, ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪಿ.ಸಿ.ಮೋಹನ್ ಮುಂತಾದವರು ಭಾಗವಹಿಸಿದ್ದರು. ಕಾಂಗ್ರೆಸ್, ಜೆಡಿಎಸ್ ಮಾಜಿ ಕಾರ್ಪೋರೇಟರ್ಗಳಾದ ರಾಮಚಂದ್ರ, ಚಂದ್ರಪ್ಪರೆಡ್ಡಿ, ದೇವದಾಸ್, ಲಕ್ಷ್ಮಿನಾರಾಯಣ ಬಿಜೆಪಿ ಸೇರಿದರು.