<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ಆರೋಗ್ಯ ಪರಿಸ್ಥಿತಿ ಕುಸಿದಿದೆ. ಮಾನವ ಹಕ್ಕುಗಳಿಗೆ ಧಕ್ಕೆ ಎದುರಾಗಿ ಮಾರಣಹೋಮ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸಿ, ಪರಿಸ್ಥಿತಿ ನಿಯಂತ್ರಿಸಬೇಕು’ ಎಂದು ಕರ್ನಾಟಕ ಬಲಿಜ ಜಾಗೃತಿ ವೇದಿಕೆಯ ಕಾರ್ಯದರ್ಶಿ ಜಿ.ಜ್ಞಾನೇಶ್ ಮನವಿ ಮಾಡಿದ್ದಾರೆ.</p>.<p>ಈ ಸಂಬಂಧ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ’ಚಾಮರಾಜನಗರ ಜಿಲ್ಲೆಯಲ್ಲಿ ಆಮ್ಲಜನ ಸಿಗದೆ ರೋಗಿಗಳ ಮೃತಪಟ್ಟ ಘಟನೆ ದಾರುಣ. ಸರ್ಕಾರದ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ. ಕೋಲಾರದಲ್ಲೂ ಇದೇ ರೀತಿರೋಗಿಗಳು ಮೃತಪಟ್ಟಿದ್ದು, ಇದಕ್ಕೆ ಸರ್ಕಾರವನ್ನೇ ಹೊಣೆ ಮಾಡಿ ವರದಿ ಕೇಳಬೇಕು. ಇದಕ್ಕೆ ಕಾರಣಕರ್ತರಾದ ಸಚಿವರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿಚಾರಣೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ಆರೋಗ್ಯ ಪರಿಸ್ಥಿತಿ ಕುಸಿದಿದೆ. ಮಾನವ ಹಕ್ಕುಗಳಿಗೆ ಧಕ್ಕೆ ಎದುರಾಗಿ ಮಾರಣಹೋಮ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸಿ, ಪರಿಸ್ಥಿತಿ ನಿಯಂತ್ರಿಸಬೇಕು’ ಎಂದು ಕರ್ನಾಟಕ ಬಲಿಜ ಜಾಗೃತಿ ವೇದಿಕೆಯ ಕಾರ್ಯದರ್ಶಿ ಜಿ.ಜ್ಞಾನೇಶ್ ಮನವಿ ಮಾಡಿದ್ದಾರೆ.</p>.<p>ಈ ಸಂಬಂಧ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ’ಚಾಮರಾಜನಗರ ಜಿಲ್ಲೆಯಲ್ಲಿ ಆಮ್ಲಜನ ಸಿಗದೆ ರೋಗಿಗಳ ಮೃತಪಟ್ಟ ಘಟನೆ ದಾರುಣ. ಸರ್ಕಾರದ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ. ಕೋಲಾರದಲ್ಲೂ ಇದೇ ರೀತಿರೋಗಿಗಳು ಮೃತಪಟ್ಟಿದ್ದು, ಇದಕ್ಕೆ ಸರ್ಕಾರವನ್ನೇ ಹೊಣೆ ಮಾಡಿ ವರದಿ ಕೇಳಬೇಕು. ಇದಕ್ಕೆ ಕಾರಣಕರ್ತರಾದ ಸಚಿವರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿಚಾರಣೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>